ತ್ಯಾಜ್ಯ ವಿಲೇವಾರಿಯಲ್ಲಿ ಜಾಗೃತಿ ಅಗತ್ಯ- ಕ್ಲೀನ್ ಕರ್ನಾಟಕಕ್ಕೆ ಸಚಿವ ಡಾ.ನಾರಾಯಣಗೌಡ ಕರೆ

ಬೆಂಗಳೂರು, ಅ.22: ಬೆಂಗಳೂರಿನ ಅರಮನೆ ಆವರಣದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಅವರು ಚಾಲನೆ ನೀಡಿದರು.

ಬೆಂಗಳೂರು ಅರಮನೆ, ಮೈಸೂರು ಅರಮನೆ, ಹಂಪಿ, ಶ್ರೀರಂಗಪಟ್ಟಣ, ಮಡಿಕೇರಿ ಕೋಟೆ,ಗೋಳಗುಮ್ಮಟ ಸೇರಿದಂತೆ ಕರ್ನಾಟಕದ ಪ್ರಸಿದ್ದ, ಐತಿಹಾಸಿಕ ಸ್ಥಳಗಳಲ್ಲಿ ಕ್ಲೀನ್ ಇಂಡಿಯಾ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ದೇಶದಲ್ಲಿ ಅಕ್ಟೋಬರ್ 1 ರಿಂದ 31 ರವರೆಗೂ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ.

ಕ್ಲೀನ್ ಇಂಡಿಯಾ ಅಭಿಯಾನದಲ್ಲಿ NYK, NSS ಹಾಗೂ ಕ್ರೀಡಾ ಇಲಾಖೆಯ 1,57, 814 ಸ್ವಯಂ ಸೇವಕರು ಪಾಲ್ಗೊಂಡಿದ್ದಾರೆ.

ಕ್ಲೀನ್ ಇಂಡಿಯಾ ಅಭಿಯಾನಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ. ಕರ್ನಾಟಕದಲ್ಲಿ ಇದುವರೆಗೂ 4,65,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಕರ್ನಾಟಕದಿಂದ 6 ಲಕ್ಷ ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಮೂಲಕ ನಿರೀಕ್ಷಿತ ಗುರಿಯನ್ನೂ ಮೀರಿ ಸಾಧನೆ ಮಾಡಲಿದ್ದೇವೆ ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವದಲ್ಲೇ ಸ್ವಚ್ಛ ಭಾರತ ಮಾಡಲು ನಾವೆಲ್ಲರೂ ಪಣ ತೋಡೋಣ‌. ಸ್ವಚ್ಛ ಭಾರತವಾದರೇ ದೇಶ ಮತ್ತಷ್ಟು ಪ್ರಗತಿ ಕಾಣಲಿದೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ಕರೆ ನೀಡಿದರು.

ನಮ್ಮ ಕಸವನ್ನು ನಾವೇ ಕ್ಲೀನ್ ಮಾಡಬೇಕು. ಎಲ್ಲೆಂದರಲ್ಲಿ ಬೇಕಾಬಿಟ್ಟಿಯಾಗಿ ಕಸವನ್ನು ಎಸೆಯಬಾರದು. ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಈ ಬಗ್ಗೆ ಜಾಗೃತಿ ನೀಡಬೇಕು. ಸರಿಯಾದ ರೀತಿಯಲ್ಲಿ ತ್ಯಾಜ್ಯ ವಿಲೇವಾರಿ ಮಾಡುವುದರಿಂದ ದೇಶ ಮತ್ತಷ್ಟು ಪ್ರಗತಿ ಕಾಣಲಿದೆ ಎಂದು ಸಚಿವ ಡಾ.ನಾರಾಯಣ ಗೌಡ ಅವರು ಹೇಳಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸ್ವಚ್ಚತಾ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ, ಕೇಂದ್ರ ಕ್ರೀಡಾ ಇಲಾಖೆ ಪ್ರತಿನಿಧಿ ಡಾ.ರವಿ ಕುಮಾರ್ ಸಿನ್ಹಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Comments (0)

Leave a Comment