ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಂಬಂಧ ಒಂದು ವಾರದಲ್ಲಿ ಸಭೆ: ಭಾರತಿ ವಿಷ್ಣುವರ್ಧನ್ ಗೆ ಸಿಎಂ ಅಭಯ
- by Suddi Team
- June 5, 2018
- 118 Views
ಬೆಂಗಳೂರು : ಸಾಹಸ ಸಿಂಹ ದಿ.ವಿಷ್ಣುವರ್ಧನ್ ದ್ಮಾರಕ ನಿರ್ಮಾಣ ಸಂಬಂಧ ಇನ್ನೊಂದು ವಾರದಲ್ಲಿ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಭಾರತಿ ವಿಷ್ಣುವರ್ಧನ್ ಗೆ ಅಭಯ ನೀಡಿದ್ದಾರೆ.
ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಹಾಗೂ ನಟ ಅನಿರುದ್ಧ್ ಇಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿದರು. ಜೆ.ಪಿ.ನಗರ ಸಿಎಂ ನಿವಾಸದಲ್ಲಿ ಭೇಟಿ ನೀಡಿ ಶುಭ ಕೋರಿದರು. ನಂತರ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಸಂಬಂಧ ಕೆಲಕಾಲ ಸಿಎಂ ಜೊತೆ ಚರ್ಚಿಸಿದರು.ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೆ ಮನವಿ ಮಾಡಿದರು.ಮನವಿಗೆ ಸ್ಪಂಧಿಸಿದ ಸಿಎಂ ಒಂದು ವಾರದಲ್ಲಿ ಸಭೆ ಕರೆದು ಈ ಕುರಿತು ನಿರ್ಧಾರ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಭಾರತಿ ವಿಷ್ಣುವರ್ಧನ್,ನೂತನ ಸಿಎಂ ಕುಮಾರಸ್ವಾಮಿ ಅವರಿಗೆ ಶುಭ ಕೋರಲು ಬಂದಿದ್ದೆವು, ವಿಷ್ಣು ಸ್ಮಾರಕ ವಿಷಯವನ್ನೂ ಪ್ರಸ್ತಾಪಿಸಿದೆವು,ಡಾ. ವಿಷ್ಣುವರ್ಧನ್ ಸ್ಮಾರಕ ಕುರಿತು ಒಂದು ವಾರದಲ್ಲಿ ಸಭೆ ಕರೆಯುತ್ತೇನೆ,ಆ ಸಭೆಯಲ್ಲಿ ಸ್ಮಾರಕದ ಬಗ್ಗೆ ಚರ್ಚೆ ಮಾಡೋಣ ಎಂದು ತಿಳಿಸಿದ್ದಾರೆ ಎಂದರು.
Related Articles
Thank you for your comment. It is awaiting moderation.


Comments (0)