ಟಿಪ್ಪು ಜಯಂತಿಗೆ ಬಿಜೆಪಿ ವಿರೋಧ: ಪ್ರತಿಭಟನೆಯ ಬಿಸಿ!
- by Suddi Team
- November 9, 2018
- 135 Views
ಬೆಂಗಳೂರು: ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಣೆ ಶುರು ಮಾಡಿದಾಗಿನಿಂದಲೂ ಅದನ್ನು ಬಿನೆಪಿ ವಿರೋಧಿಸುತ್ತಲೇ ಬಂದಿದೆ. ಈ ಬಾರಿಯೂ ಟಿಪ್ಪು ಜಯಂತಿಯನ್ನು ವಿರೋಧಿಸಿ ರಾಜ್ಯ ಬಿಜೆಪಿ ಘಟಕ ಪ್ರತಿಭಟನೆ ನಡೆಸಿತು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ನಡೆದ ಸಂಸದ ಪಿ.ಸಿ.ಮೋಹನ್, ಮಾಜಿ ಡಿಸಿಎಂ ಆರ್. ಅಶೋಕ್, ಎಂ.ಎಲ್.ಸಿ. ನಾರಾಯಣ ಸ್ವಾಮಿ, ಬಿಎಸ್ವೈ ಪುತ್ರ ಬಿ.ವೈ.ವಿಜಯೇಂದ್ರ, ಬಿಬಿಎಂಪಿ ಸದಸ್ಯರು, ಬಿಜೆಪಿ ಮುಖಂಡರು ಭಾಗಿಯಾಗಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಓಟ್ ಬ್ಯಾಂಕ್ ಗಾಗಿ ಟಿಪ್ಪು ಜಯಂತಿ ಮಾಡಲಾಗ್ತಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಹರಿಹಾಯ್ದರು.
ಬೆಂಗಳೂರು ಮಾತ್ರವಲ್ಲದೆ ರಾಜ್ಯಾದ್ಯಂತ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ನಾಳೆಯೂ ಟಿಪ್ಪು ಜಯಂತಿಗೆ ಪ್ರತಿಭಟನೆಯ ಬಿಸಿ ತಟ್ಟಲಿದೆ. ಪ್ರತಿಭಟನೆಯಿಂದ ಕಾನೂನು ಸುವ್ಯವಸ್ಥೆ ಹಾಳಾಗದಂತೆ ಪೊಲೀಸ್ ಇಲಾಖೆ ಈಗಾಗಲೇ ಎಚ್ಚರ ವಹಿಸಿದೆ.
Related Articles
Thank you for your comment. It is awaiting moderation.


Comments (0)