ಪ್ರಣಬ್ ಮುಖರ್ಜಿ ನಿಧನಕ್ಕೆ ಸಿಎಂ ಬಿಎಸ್ವೈ ಸಂತಾಪ
- by Suddi Team
- August 31, 2020
- 14 Views

ಬೆಂಗಳೂರು: ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಣಬ್ ರವರ ಸೇವೆ, ಸಾಧನೆಗಳು ಅನನ್ಯ. ದಶಕಗಳ ಕಾಲ ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಪ್ರಧಾನ ಪಾತ್ರ ವಹಿಸಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಣಿಜ್ಯ, ವಿದೇಶಾಂಗ, ಹಣಕಾಸು, ರಕ್ಷಣಾ ಸಚಿವರಾಗಿ ಅವರು ಅವಿಸ್ಮರಣೀಯ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು ಎಂದು ಸಿಎಂ ಸ್ಮರಿಸಿದ್ದಾರೆ.
ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ! ಎಂದು ಸಂತಾಪ ಸೂಚಿಸಿದ್ದಾರೆ.
Related Articles
Thank you for your comment. It is awaiting moderation.
Comments (0)