ಕೋವಿಡ್ ಲಸಿಕೆ ಪಡೆದ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ್

ಬೆಂಗಳೂರು: ಸಿಎಂ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ವಿಕ್ಟೊರಿಯಾ ಆಸ್ಪತ್ರೆಯಲ್ಲಿ ಇಂದು ಕೊರೊನಾ ಲಸಿಕೆಯ ಮೊದಲನೇ ಡೋಸ್ ಪಡೆದರು.

ಲಸಿಕೆ ಪಡೆದ ನಂತರ ಮಾತನಾಡಿದ ಸಿಎಂ, ಕೋವ್ಯಾಕ್ಸೀನ್ ದೇಶೀಯ ಲಸಿಕೆ.ಇದನ್ನ ನಾನೂ ತೆಗೆದುಕೊಳ್ಳುತ್ತಿದ್ದೇನೆ.
ಪ್ರಧಾನಿ ಮಾತ್ರವಲ್ಲ ಅವರ ತಾಯಿ ಕೂಡ ತೆಗೆದುಕೊಂಡಿದ್ದಾರೆ.ಜನತೆಗೆ ಕರೆ ನೀಡ್ತೀನಿ. ಇದನ್ನ ತಗೆದುಕೊಳ್ಳೋದ್ರಿಂದ ಯಾವುದೇ ಸಮಸ್ಯೆ ಇಲ್ಲ ಎಂದರು.

ಆರೋಗ್ಯ ಸಚಿವ ಸುಧಾಕರ್ ಮಾತನಾಡುತ್ತಾ ಎಲ್ಲ ಹಿರಿಯ ನಾಗರೀಕರು, ಅರ್ಹ ವ್ಯಕ್ತಿಗಳು ಆದಷ್ಟು ಬೇಗ ನೋಂದಣಿ ಮಾಡಿಕೊಂಡು ತಪ್ಪದೆ ಲಸಿಕೆ ಪಡೆಯಬೇಕೆಂದು ಕೋರಿದರು.

ಭಾರತ ಮತ್ತು ಕರ್ನಾಟಕವನ್ನು ಕೊರೊನಾ ಮುಕ್ತವಾಗಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಕರೆ ನೀಡಿದರು.
ಸ್ವತಃ ವೈದ್ಯರಾಗಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ಮುಂಚೂಣಿ ಕಾರ್ಯಕರ್ತರ ಕೋಟಾದಡಿ ಲಸಿಕೆ ಪಡೆದಿದ್ದಾರೆ.

Related Articles

Comments (0)

Leave a Comment