ಬಿಜೆಪಿ ಇತಿಹಾಸ ತಿರುಚಲು ಕಾಂಗ್ರೆಸ್ ಬಿಡಲ್ಲ: ಡಿಕೆಶಿ
- by Suddi Team
- July 28, 2020
- 45 Views

ಫೈಲ್ ಫೋಟೋ:
ಬೆಂಗಳೂರು: ಟಿಪ್ಪು ಸುಲ್ತಾನ್ ವಿಚಾರ ಕೇವಲ ಒಂದು ವರ್ಗಕ್ಕೆ ಸೀಮಿತವಾದ ವಿಚಾರವಲ್ಲ. ಅವರು ದೇಶದ ಇತಿಹಾಸದ ಒಂದು ಭಾಗ. ಬಿಜೆಪಿ ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನೆ ತಿರುಚಲು ಪ್ರಯತ್ನಿಸುತ್ತಿದೆ ಅಂತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ರು.
7ನೇ ತರಗತಿ ಪಠ್ಯದಿಂದ ಟಿಪ್ಪು ಕುರಿತ ಪಾಠಗಳನ್ನು ತೆಗೆದು ಹಾಕಿರೋ ಸರ್ಕಾರದ ನಿಲುವು ಕುರಿತು ಮಾತನಾಡಿದ ಡಿಕೆಶಿ, ಬಿಜೆಪಿಯವರು ಜನರ ದಾರಿ ತಪ್ಪಿಸಲು ನಾವು ಬಿಡುವುದಿಲ್ಲ. ಇದರ ಸಾಧಕ ಬಾಧಕಗಳ ಕುರಿತು ನಾವು ತಜ್ಞರಿಂದ ಅಧ್ಯಯನ ನಡೆಸುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಇತಿಹಾಸ ತಿರುಚುವುದು, ಸಂವಿಧಾನ ಬದಲಿಸುವುದು ಖಂಡನೀಯ ಎಂದರು.
ಬಿಜೆಪಿ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದು ಬಿಡುವುದು ಆ ಸರ್ಕಾರಕ್ಕೆ ಬಿಟ್ಟ ವಿಚಾರ. ಟಿಪ್ಪು, ಹೈದರಾಲಿ ಅವರು ನಮ್ಮ ಇತಿಹಾಸದ ಭಾಗ. ಈ ದೇಶದ ರಾಷ್ಟ್ರಪತಿ ಕೋವಿಂದ್ ಅವರು ವಿಧಾನಸೌಧಕ್ಕೆ ಬಂದು ಜಂಟಿ ಅಧಿವೇಶನದಲ್ಲಿ ಟಿಪ್ಪು ಇತಿಹಾಸ, ಚರಿತ್ರೆ, ದೇಶಭಕ್ತಿ ಬಗ್ಗೆ ಹಾಡಿ ಹೊಗಳಿ ಹೋಗಿದ್ದಾರೆ. ನಮ್ಮ ಇತಿಹಾಸ ಬದಲಾವಣೆ ಆಗಬಾರದು. ಆದರೆ, ಬಿಜೆಪಿ ಇದನ್ನು ಮೊಟಕು ಮಾಡಲು ಪ್ರಯತ್ನಿಸುತ್ತಿದೆ. ನಮ್ಮ ಮಕ್ಕಳಿಗೆ ತಿಳುವಳಿಕೆ ಹೇಳಿಕೊಡಬೇಕು. ಇದರ ಬಗ್ಗೆಯೂ ನಮ್ಮ ತಂಡ ಅಧ್ಯಯನ ಮಾಡಲಿದೆ ಎಂದು ತಿಳಿಸಿದರು.
Related Articles
Thank you for your comment. It is awaiting moderation.
Comments (0)