ಹೊಸ ಕಾರು ಖರೀದಿಗೆ ಸಲ್ಲಿಸಿದ್ದ ಅರ್ಜಿಗಳು ವಾಪಸ್!
- by Suddi Team
 - June 22, 2018
 - 149 Views
 
ಬೆಂಗಳೂರು: ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಗೆ ಬಂದಿದ್ದ 6 ಸಚಿವರು ಮತ್ತು 5 ಅಧಿಕಾರಿಗಳ ಅರ್ಜಿಗಳನ್ನು ವಾಪಸ್ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಚುವರಾದ ಕೆ.ಜೆ ಜಾರ್ಜ್, ಡಿ.ಕೆ.ಶಿವಕುಮಾರ್, ಜಯಮಾಲಾ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್, ಯು.ಟಿ ಖಾದರ್ ಹೊಸ ಕಾರಿಗಾಗಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, 5 ಮಂದಿ ಅಧಿಕಾರಿಗಳು ಕೂಡ ಕಾರು ಖರೀದಿಗೆ ಅರ್ಜಿಗಳನ್ನು ಸಲ್ಲಿಸಿದ್ದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಬಂದಿದ್ದ 11 ಅರ್ಜಿಗಳನ್ನು ವಾಪಸ್ ಕಳಿಸಲಾಗಿದೆ. ಈ ವರ್ಷ ಅನಗತ್ಯ ವೆಚ್ಚಕ್ಕೆ ಹಣ ನೀಡದಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಣಕಾಸು ಇಲಾಖೆಗೆ ಖಡಕ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಅನುಮತಿ ನಿರಾಕರಿಸಿ ಅರ್ಜಿಗಳನ್ನು ವಾಪಸ್ ಕಳಿಸಲಾಗಿದೆ.
Related Articles
                            Thank you for your comment. It is awaiting moderation.
                        
                                        
                    
                    
                
                            
                                            
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
                                                                                                                                                    
Comments (0)