ಹೊಸ ಕಾರು ಖರೀದಿಗೆ ಸಲ್ಲಿಸಿದ್ದ ಅರ್ಜಿಗಳು ವಾಪಸ್!

ಬೆಂಗಳೂರು: ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳು ಸೂಚಿಸಿದ ಹಿನ್ನೆಲೆಯಲ್ಲಿ ಹೊಸ ಕಾರು ಖರೀದಿಗೆ ಬಂದಿದ್ದ 6 ಸಚಿವರು ಮತ್ತು 5 ಅಧಿಕಾರಿಗಳ ಅರ್ಜಿಗಳನ್ನು ವಾಪಸ್ ಕಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಚುವರಾದ ಕೆ.ಜೆ ಜಾರ್ಜ್, ಡಿ.ಕೆ.ಶಿವಕುಮಾರ್, ಜಯಮಾಲಾ, ಪ್ರಿಯಾಂಕ್ ಖರ್ಗೆ, ಶಿವಾನಂದ ಪಾಟೀಲ್, ಯು.ಟಿ ಖಾದರ್ ಹೊಸ ಕಾರಿಗಾಗಿ ಅರ್ಜಿ ಸಲ್ಲಿಸಿದ್ದರು. ಅಲ್ಲದೆ, 5 ಮಂದಿ ಅಧಿಕಾರಿಗಳು ಕೂಡ ಕಾರು ಖರೀದಿಗೆ ಅರ್ಜಿಗಳನ್ನು ಸಲ್ಲಿಸಿದ್ದರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಬಂದಿದ್ದ 11 ಅರ್ಜಿಗಳನ್ನು ವಾಪಸ್ ಕಳಿಸಲಾಗಿದೆ. ಈ ವರ್ಷ ಅನಗತ್ಯ ವೆಚ್ಚಕ್ಕೆ ಹಣ ನೀಡದಂತೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಣಕಾಸು ಇಲಾಖೆಗೆ ಖಡಕ್ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಅನುಮತಿ ನಿರಾಕರಿಸಿ ಅರ್ಜಿಗಳನ್ನು ವಾಪಸ್ ಕಳಿಸಲಾಗಿದೆ.

Related Articles

Comments (0)

Leave a Comment