ಇಲಾಖೆಗಳ ಶೀಘ್ರ ವಿಭಜನೆ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು. ಜೂ. 22 : ಲೋಕೋಪಯೋಗಿ ಇಲಾಖೆ, ನೀರಾವರಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯನ್ನು ಶೀಘ್ರವಾಗಿ ವಿಭಜಿಸುವಂತೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದರು.

ವಿಧಾನಸೌಧದಲ್ಲಿಂದು ಇಲಾಖೆಗಳನ್ನು ವಿಭಜಿಸುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಇಲಾಖೆಗಳನ್ನು ವಿಭಜಿಸಲು ಕಳೆದ ಹಲವಾರು ವರ್ಷಗಳಿಂದ ಪ್ರಯತ್ನಿಸಲಾಗುತ್ತಿದೆ. ಇಂಜಿನಿಯರ್‍ಗಳು ಹಾಗೂ ಇಂಜಿನಿಯರಿಂಗ್ ಸಂಘದ ಪದಾಧಿಕಾರಿಗಳ ಅಭಿಪ್ರಾಯವನ್ನು ಪಡೆಯಲಾಗಿದೆ. ಈ ಮೂರು ಇಲಾಖೆಗಳಿಂದ ಮಾಹಿತಿ ಕ್ರೂಡೀಕರಿಸಲಾಗಿದೆ. ಸಾಧಕ ಬಾದಕಗಳ ಕುರಿತು ಚರ್ಚಿಸಲಾಗಿದೆ. ವಿಭಜಿಸುವ ನಿರ್ಣಯವನ್ನು ಕೈಗೊಳ್ಳಲಾಗಿದೆ. ಇದು ಉತ್ತಮ ನಿರ್ಧಾರವಾಗಿದೆ. ನೀರಾವರಿ ಸಚಿವರು ಹಾಗೂ ಗ್ರಾಮೀಣಾವೃದ್ಧಿ ಸಚಿವರು ಇಲಾಖೆಗಳನ್ನು ವಿಭಜನೆ ನಿರ್ಣಯಕ್ಕೆ ಸಹಮತ ವ್ಯಕ್ತಪಡಿಸಿ, ಸಹಕರಿಸಿದ ಗ್ರಾಮೀಣಾಭಿವೃದ್ಧಿ ಹಾಗೂ ನೀರಾವರಿ ಸಚಿವರಿಗೆ ಡಿಸಿಎಂ ಧನ್ಯವಾದಗಳನ್ನು ವ್ಯಕ್ತಪಡಿಸಿದ ಡಿಸಿಎಂ, ಶೀಘ್ರವಾಗಿ ವಿಭಜನೆಯ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

Related Articles

Comments (0)

Leave a Comment