ಅಸಮಧಾನವಿದ್ದರೂ ಅಭ್ಯರ್ಥಿ ಗೆಲುವಿಗ ಶ್ರಮಿಸುತ್ತೇವೆ: ಮಾಜಿ ಮೇಯರ್ ನಟರಾಜ್!

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಅಸಮಧಾನ ಇರವುದು ನಜವಾದರೂ ಒಕ್ಷದ ಅಭ್ಯರ್ಥಿ ಗೆಲುವಿಗೆ ಬಿಬಿಎಂಪಿ ಸದಸ್ಯರೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಮಾಜಿ ಮೇಯರ್ ಎಸ್.ಕೆ.ನಟರಾಜ್ ಹೇಳಿದ್ದಾರೆ.

ಜಯನಗರದ ಪೈ ವಿಸ್ತ ಕನ್ವೆನ್ಷನ್ ಹಾಕ್ ನಲ್ಲಿ ಪಾಲಿಕೆಯ ಬಿಜೆಪಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ದಿ.ವಿಜಯ್ ಕುಮಾರ್ ಅವರ ಸೇವೆಯನ್ನು ಸ್ಮರಿಸಿ ಅವರಿಗೆ ಬೆಲೆ ಕೊಟ್ಟು ಈ ಬಾರಿ ಬಿಜೆಪಿ ಗೆಲುವಿಗೆ ಶ್ರಮಿಸುತ್ತೇವೆ,ನಾವೆಲ್ಲಾ ಒಗ್ಗಟ್ಟಾಗಿದ್ದೇವೆ. ಈ ಸಾರಿ ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಬಾಬು ಅವರನ್ನು ಗೆಲ್ಲಿಸಿಕೊಂಡು ವಿಜಯ್ ಕುಮಾರ್ ಗೆ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಎಂದರು.

ಇಂದು ನಮ್ಮ ಗೆಲುವಿನ ಸಾಧ್ಯತೆ ಹೆಚ್ಚಿರುವುದರಿಂದ ಉಳಿದ ಪಕ್ಷದವರು ಹತಾಶೆಗೊಂಡಿದ್ದಾರೆ. ಇದರಿಂದ ಏನು ಮಾಡಬೇಕೆಂದು ತಿಳಿಯದೇ ಅನಗತ್ಯ ಆರೋಪ ಮಾಡುತ್ತಿದ್ದಾರೆ. ನಾವೆಲ್ಲಾ ಒಂದಾಗಿದ್ದೇವೆ. ಬೇರೆಯೆನ್ನುವ ಪ್ರಶ್ನೆ ಇಲ್ಲ. ಎಲ್ಲರೂ ಒಂದಾಗಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುತ್ತೇವೆ ಎಂದು ಪಾಲಿಕೆ ಸದಸ್ಯರಲ್ಲಿ ಭಿನ್ನಮತವಿದೆ ಎನ್ನುವ ಆರೋಪವನ್ನು ತಳ್ಳಿಹಾಕಿದರು.

ಪಕ್ಷ ನಮಗೆ ತಾಯಿ ಸಮಾನ. ಪಕ್ಷದ ಉಳಿವಿಗಾಗಿ ಶ್ರಮಿಸುತ್ತೇವೆ. ನಮ್ಮದು ಸಾಂಗಿಕ ಹೋರಾಟ. ಪಕ್ಷಕ್ಕೆ ನಾವು ದ್ರೋಹ ಮಾಡುತ್ತೇವೆ ಎನ್ನುವ ಮಾತು ಸರಿಯಲ್ಲ. ಮಾಧ್ಯಮ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿರುವ ಮಾತಿಗೆ ಯಾರೂ ಬೆಲೆಕೊಡಬೇಡಿ ಎಂದು ಮನವಿ ಮಾಡಿದರು.

ನಮ್ಮೊಂದಿಗೆ ಇಂದು ಕಾರ್ಪೊರೇಟರ್ ನಾಗರಾಜ್ ಅವರು ಮಾತ್ರ ಇಲ್ಲ. ಆದರೆ ಅವರು ಪಕ್ಷದಲ್ಲಿದ್ದೇನೆ ಎಂದು ಹೇಳಿದ್ದಾರೆ. ಅವರು ಅದನ್ನು ಅವರೇ ಸ್ಪಷ್ಟಪಡಿಸಬೇಕು,ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಎಂದರು.

Related Articles

Comments (0)

Leave a Comment