ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ವೇತನ!
- by Suddi Team
- June 10, 2018
- 40 Views
ಬೆಂಗಳೂರು: 6 ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸು ಜಾರಿ ಆದೇಶದಂತೆ ಸರ್ಕಾರಿ ನೌಕರರ ವೇತನ, ಭತ್ಯೆ ಪಿಂಚಣಿ ಪರಿಷ್ಕರಿಸಿ ಏ.1ರಿಂದ ಪೂರ್ವನ್ವಯವಾಗುವಂತೆ ಪಾವತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಮುಖ್ಯ ಕಾರ್ಯ ಆದೇಶ ಹೊರಡಿಸಿದ್ದಾರೆ.
2018ರ ಪರಿಷ್ಕೃತ ವೇತನ ಶ್ರೇಣಿ ಹಾಗೂ ಪಿಂಚಣಿ ಲಾಭವನ್ನು ಏ.1ರಿಂದ ಪಾವತಿಸುವಂತೆ ಹಾಗು 2018 ಏಪ್ರಿಲ್ ನಂತರದಲ್ಲಿ ಪರಿಷ್ಕೃತ ವೇತನ ಶ್ರೇಣಿಯನ್ನು ನಿಗದಿಪಡಿಸಿದ ಪ್ರಕರಣಗಳಲ್ಲಿ ಅವರಿಗೆ ಲಭ್ಯವಿರುವ ಬಾಕಿಯನ್ನು ಪಾವತಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್ ಸೂಚನೆ ನೀಡಿದ್ದಾರೆ.
ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಎಲ್ಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳಿಗೆ ಐ.ಎನ್.ಎಸ್.ಪ್ರಸಾದ್ ನಿರ್ದೇಶನ ನೀಡಿದ್ದು,ಪ್ರಧಾನ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಗಳ ಅಧೀನದಲ್ಲಿ ಬರುವ ಎಲ್ಲ ಮುಖ್ಯಸ್ಥರಿಗೆ ಈ ನಿಟ್ಟಿನಲ್ಲಿ ಸೂಕ್ತ ನಿರ್ದೇಶನ ನೀಡುವಂತೆ ಸೂಚನೆ ನೀಡಿದ್ದಾರೆ.
ಜನವರಿ 31ರಂದು 6ನೇ ವೇತನ ಆಯೋಗ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಕುರಿತಂತೆ ಸರ್ಕಾರಕ್ಕೆ ಶಿಫಾರಸು ಮಾಡಿತ್ತು. ಇದನ್ನು ಅನುಷ್ಠಾನಗೊಳಿಸಿ ಮಾರ್ಚ್ 1 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
Related Articles
Thank you for your comment. It is awaiting moderation.
Comments (0)