ದಿ. ಕೆ.ಸಿ. ರೆಡ್ಡಿ ಅವರ ಕಂಚಿನ ಪ್ರತಿಮೆ ಸ್ಥಾಪನೆಗೆ ಗೋವಿಂದ ಕಾರಜೋಳ ಸೂಚನೆ

ಬೆಂಗಳೂರು. ಜೂ. 22: ದಿ. ಶ್ರೀ ಕೆ.ಸಿ. ರೆಡ್ಡಿ ಅವರ ಮಾದರಿ ಪ್ರತಿಮೆ ಬದಲಾಯಿಸಿ ಶಾಶ್ವತವಾಗಿ ಉಳಿಯುವಂತಹ ಮೂಲ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲಾಗುವುದು ಎಂದು ಉಪಮುಖ್ಯಮಂತ್ರಿಯವರಾದ ಗೋವಿಂದ ಎಂ ಕಾರಜೋಳ ಅವರು ತಿಳಿಸಿದರು.

ವಿಧಾನಸೌಧದಲ್ಲಿಂದು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪ್ರತಿಮೆಯ ಮಾದರಿಗಳ ತರಿಸಿಕೊಂಡು ಸೂಕ್ಷ್ಮವಾಗಿ ಅಧ್ಯಯನ ಮಾಡಿ, ನೈಜ ಪ್ರತಿಮೆಯನ್ನು ಸ್ಥಾಪಿಸಬೇಕು. ನುರಿತ ಹಾಗೂ ಪರಿಣಿತರ ಸಹಕಾರದೊಂದಿಗೆ ಈ ಪ್ರತಿಮೆಯನ್ನು ಸ್ಥಾಪಿಸಬೇಕು.ಕೆ.ಸಿ. ರೆಡ್ಡಿ ಯವರ ಕೊಡುಗೆ ಅಪಾರವಾಗಿದೆ. ಅವರ ಪ್ರತಿಮೆಯು ಶಾಶ್ವತವಾಗಿರುವಂತೆ ಸ್ಥಾಪಿಸಲು ಕ್ರಮಕೈಗೊಳ್ಳಬೇಕು. ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು ಅನುಸರಣಾ ವರದಿಯೊಂದಿಗೆ ಮುಂದಿನ ಸಭೆಯಲ್ಲಿ ಮಂಡಿಸಬೇಕು ಎಂದು ಡಿಸಿಎಂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

Related Articles

Comments (0)

Leave a Comment