ಜೆಡಿಎಸ್ಗೆ ಸೇರ್ಪಡೆಯಾದ ನೂರಾರು ಮುಖಂಡರು
- by Suddi Team
- July 1, 2021
- 12 Views

ಬೆಂಗಳೂರು– ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದರು.
ಈಗಾಗಲೇ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಬಂಡೆಪ್ಪ ಕಾಶಂಪೂರ್ ಮತ್ತಿತರರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಯಾದ ಎಲ್ಲರನ್ನೂ ಬಾವುಟ ಮತ್ತು ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಕಾಂಗ್ರೆಸ್ ಹಾಗೂ ಬಿಜೆಪಿ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಕಾರ್ಯಕರ್ತರು ಜೆಡಿಎಸ್ನ ತತ್ವ-ಸಿದ್ಧಾಂತ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನಾಯಕತ್ವವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಜಿ ಸಚಿವ ಸಿ.ಎಂ.ಉದಾಸಿ ಅವರ ನಿಧನದಿಂದ ತೆರವಾಗಿರುವ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದಲ್ಲೇ ಉಪಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಜೆಡಿಎಸ್ ಈಗಾಗಲೇ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದೆ.
ಬಿಜೆಪಿ ಮತ್ತು ಕಾಂಗ್ರೆಸ್ಗೆ ಪ್ರಬಲ ಸ್ಪರ್ಧೆ ನೀಡಲೇಬೇಕೆಂದು ಪಣ ತೊಟ್ಟಿರುವ ಜೆಡಿಎಸ್ ಕ್ಷೇತ್ರದಲ್ಲಿ ತನ್ನ ಪ್ರಾಬಲ್ಯ ಮೆರೆಯಲು ಸಜ್ಜಾಗಿದೆ.
Related Articles
Thank you for your comment. It is awaiting moderation.
Comments (0)