ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುವೆ,ಉಸಿರಿರುವವರೆಗೆ ಇಲ್ಲೇ ಇರುತ್ತೇನೆ: ಸಚಿವ ಡಾ.ನಾರಾಯಣ್ ಗೌಡ
- by Suddi Team
- August 29, 2020
- 11 Views

ಮಂಡ್ಯ- 29: ಜಿಲ್ಲೆಯ ಮತ್ತು ತಾಲ್ಲೂಕಿನ ಅಭಿವೃದ್ಧಿಗಾಗಿ ಶ್ರಮವಹಿಸುತ್ತೇನೆ. ನನ್ನ ಉಸಿರಿರುವವರೆಗೂ ಇಲ್ಲೇ ಇರುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.
ಅಂದು ಜೀವನೋಪಾಯಕ್ಕಾಗಿ ಮುಂಬೈಗೆ ಹೋಗಿದ್ದೆ. ಕ್ಷೇತ್ರದ ಜನ ಮೂರು ಬಾರಿ ಗೆಲ್ಲಿಸಿದ್ದಾರೆ. ಗೆದ್ದಮೇಲೆ ಮುಂಬೈಗೆ ಹೋಗುತ್ತಾರೆ ಎಂದು ಕೆಲವರು ಟೀಕಿಸಿದರು. ಆದ್ರೆ ಆ ಬಗ್ಗೆ ನಾನು ಮಾತಾಡಲ್ಲ. ನನ್ನ ಕ್ಷೇತ್ರವನ್ನ ಎರಡನೆ ಶಿಕಾರಿಪುರ ಮಾಡುವುದೇ ನನ್ನ ಗುರಿ. 265 ಕೋಟಿ ಅನುದಾನವನ್ನು ಕೆ.ಆರ್.ಪೇಟೆ ತಾಲೂಕಿಗೆ ತಂದಿದ್ದೇನೆ. ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಎಲ್ಲ ರೀತಿಯಲ್ಲು ಮುಖ್ಯಮಂತ್ರಿಗಳು ಸಹಕರಿಸುತ್ತಾರೆ ಎಂದು ಸಚಿವರು ಹೇಳಿದರು.
ಇಂದು ನಮ್ಮ ಸರ್ಕಾರ ನಿಮ್ಮ ಮನೆ ಮನೆಗಳಿಗೆ ಬಂದಿದೆ ಎಲ್ಲರ ಅಭಿವೃದ್ಧಿಯೇ ನಮ್ಮ ಸರ್ಕಾರದ ಅಭಿವೃದ್ಧಿ ಹಾಗೂ ಸುಮಾರು 200 ಕೋಟಿ ಅನುದಾನದಲ್ಲಿ ನರ್ಸಿಂಗ್ ಮತ್ತು ಮೆಡಿಕಲ್ ಕಾಲೇಜ್ ಸ್ಥಾಪಿಸಲಾಗುವುದು ಹಾಗೂ 666 ಕೋಟಿ ಅನುದಾನದಲ್ಲಿ ಮನೆ ಮನೆಗೆ ನೀರಿನ ವ್ಯವಸ್ಥೆ ಮಾಡಲಾಗುವುದು ಮತ್ತು ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಮುಖ್ಯಮಂತ್ರಿಗಳು ಕೆ.ಆರ್. ಪೇಟೆ ತಾಲ್ಲೂಕಿನ ಅಭಿವೃದ್ಧಿಗೆ ಮುಂದಾಗುತ್ತಾರೆ ಅಲ್ಲದೆ ಜನರ ಸಮಸ್ಯೆಗೆ ತಕ್ಷಣವೇ ಬಗೆಹರಿಯಬೇಕು. ಆ ಕಾರಣಕ್ಕಾಗಿಯೆ ಮನೆ ಬಾಗಿಲಿಗೆ ಸರ್ಕಾರ ಎಂಬ ಕಾರ್ಯಕ್ರಮ ಆಯೋಜಿಸಿದ್ದೇವೆ ಎಂದು ಸಚಿವರು ಹೇಳಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆಯ, ಕಂದಾಯ ಇಲಾಖೆ, ಸರ್ವೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಜಲಸಂಪನ್ಮೊಲ ಇಲಾಖೆ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಇತರ ಇಲಾಖೆಯ ವತಿಯಿಂದ ರೈತರ ಎಲ್ಲ ಸಮಸ್ಯೆಗಳನ್ನು ಪರಿಶೀಲಿಸಿ ಸ್ಥಳದಲ್ಲೇ ಸಾರ್ವಜನಿಕರಿಗೆ ಹಕ್ಕು ಪತ್ರಗಳನ್ನು, ಭಾಗ್ಯ ಲಕ್ಷ್ಮೀ ಬಾಂಡ್ ಗಳನ್ನು ಮತ್ತು ಪಿಂಚಣಿದಾರರಿಗೆ ಪತ್ರಗಳನ್ನು ಸಚಿವರು ವಿತರಿಸಿದರು.
ಈ ವೇಳೆ ಮಾತನಾಡಿದ ಡಿಸಿ ಡಾ. ವೆಂಕಟೇಶ್ ಜಿಲ್ಲೆಯ ಕಂದಾಯ ಸಮಸ್ಯೆಗಳನ್ನು ಬಗೆಹರಿಸಲು ಸ್ಥಳದಲ್ಲಿಯೇ ವ್ಯವಸ್ಥೆ ಮಾಡಲಾಗಿದ್ದು,ಪಿಂಚಣಿ 2 ಸಾವಿರ ಮನೆಗಳ ವಿತರಣೆಗೆ ಜಿಲ್ಲಾ ಉಸ್ತುವಾರಿ ಸಚಿವ ನಿರ್ದೇಶನದಂತೆ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾಡಳಿತ ವ್ಯವಸ್ಥಿತವಾಗಿ ಜನರ ಸಮಸ್ಯೆಗಳನ್ನು ನಿವಾರಣೆಗೆ ಮಾಡಲು ಕ್ರಮವಹಿಸಲಾಗುವುದು ಎಂದು ಹೇಳಿದರು.
ಜನರಿಂದ ಒಟ್ಟು 216 ಅರ್ಜಿಗಳು ಬಂದಿದ್ದು, ಅವುಗಳಲ್ಲಿ 54 ಅರ್ಜಿಗಳನ್ನ ಸ್ಥಳದಲ್ಲೇ ಇತ್ಯರ್ಥ ಮಾಡಲಾಗಿದೆ. ಪಿಂಚಣಿ, ಆರ್ಟಿಸಿ ಕರೆಕ್ಷನ್, ನಿವೇಶನಕ್ಕೆ ಸಂಬಂಧಿಸಿದ ಅರ್ಜಿಗಳನ್ನ ಸ್ಥಳದಲ್ಲೇ ಇತ್ಯರ್ಥಪಡಿಸಿ ಸಚಿವರು ಅರ್ಜಿದಾರರಿಗೆ ವಿತರಿಸಿದರು. ಇನ್ನುಳಿದ ಎಲ್ಲ ಅರ್ಜಿಗಳನ್ನ 15 ದಿನಗಳಲ್ಲಿ ಇತ್ಯರ್ಥ ಮಾಡಿ ಅರ್ಜಿದಾರರ ಮನೆಗೆ ತಲುಪಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ
‘ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮದಲ್ಲಿ ನಗರ ಸಭೆ ಆಯುಕ್ತರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ನ ಅಧ್ಯಕ್ಷರು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.
Comments (0)