ಮಾಸ್ಕ್ ದಿನಾಚರಣೆಗೆ ಸಿಎಂ ಚಾಲನೆ

ಬೆಂಗಳೂರು, ಜೂನ್ 18: ಇಂದು ಮಾನ್ಯಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‌ಅವರು ವಿಧಾನಸೌಧದ‌ ಅಂಬೇಡ್ಕರ್ ಪ್ರತಿಮೆಯ ಬಳಿ ಮಾಸ್ಕ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿರುವ ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸಲು “ಮಾಸ್ಕ್ ದಿನ” ಈ ಪ್ರಯುಕ್ತ ಜನ ಸಮುದಾಯದಲ್ಲಿ ಜಾಗೃತಿ ಮೂಡಿಸಲು ವಿಧಾನಸೌಧದ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಯ ಬಳಿಯಿಂದ ಕಬ್ಬನ್ ಪಾರ್ಕ್ ವರೆಗೆ ಯಡಿಯೂರಪ್ಪ ಪಾದಯಾತ್ರೆಗೆ ಚಾಲನೆ ನೀಡಿದರು.

ನಂತರ ಜನತೆಯನ್ನುದ್ದೇಶಿಸಿ ಸಿಎಂ ಮಾತನಾಡಿದರು.
ಕೋವಿಡ್ 19 ಕುರಿತು ಸಮುದಾಯದಲ್ಲಿ ಹೆಚ್ಚಿನ ಜಾಗೃತಿ ಮೂಡಿಸಲು ಈ ಮಾಸ್ಕ್ ಡೇ ಆಚರಣೆ ಮಾಡಲಾಗುತ್ತಿದೆ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಕೈ ತೊಳೆಯುವುದು ಬಹಳ ಪ್ರಮುಖವಾದ ಅಂಶಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಸಾರ್ವಜನಿಕರು ಸರ್ಕಾರದ ಜೊತೆ ಕೊರೋನಾ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದರು.

ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದೇವೆ ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಇವರೆಲ್ಲರ ಶ್ರಮದಿಂದ ಕೊರೋನಾ ನಿಯಂತ್ರಣ ಸಾಧ್ಯವಾಗಿದೆ ಬರುವ ದಿನಗಳಲ್ಲಿ ಕೊರೋನಾ ನಿಯಂತ್ರಣಕ್ಕೆ ಕಠೀಣ ಕ್ರಮ ಕೈಗೊಳ್ಳಬೇಕಿದೆ
ಹೊರ ರಾಜ್ಯಗಳಿಂದ ಬರೋರನ್ನ ತಡೆದಿದ್ದರೆ ರಾಜ್ಯದಲ್ಲಿ ಈಗಾಗಲೇ ಕೊರೋನಾ ಸಂಪೂರ್ಣ ನಿಯಂತ್ರಣಕ್ಕೆ ಬರ್ತಿತ್ತು
ಈಗಲೂ ಕಾಲ ಮಿಂಚಿಲ್ಲ ನಾನು ಎಲ್ಲರ ಸಹಕಾರ ಕೋರುತ್ತೇನೆ ಎಂದರು.

ಮಾಸ್ಕ್ ಧರಿಸುವುದರಿಂದ ನಿಮ್ಮನ್ನು ರಕ್ಷಣೆ ಮಾಡಿಕೊಳ್ಳುವುದರ ಜೊತೆ ಇತರರನ್ನೂ ರಕ್ಷಿಸಬಹುದು
ಕೋವಿಡ್ 19 ಕುರಿತು ಜನಜಾಗೃತಿಗಾಗಿ ಈ ಮಾಸ್ಕ್ ಡೇ ಆಚರಣೆ ಕೊರೋನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ಕ್ರಮ ತಗೊಂಡಿದೆ ಪ್ರಧಾನಿ ಮೋದಿ ಕೂಡಾ ನಮ್ಮ ಸರ್ಕಾರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದರು.

Related Articles

Comments (0)

Leave a Comment