ಅಧಿಕಾರಕ್ಕೆ ಬರುತ್ತೇವೆ ಎಂದ್ರು ಎಚ್‌ಡಿಕೆ: ಕುಮಾರಸ್ವಾಮಿಗೆ ಅಂಗಿ, ಪಂಚೆ, ಜುಬ್ಬಾ ಕಳುಹಿಸೋಣವೆಂದ್ರು ಡಿಕೆಶಿ

ಬೆಂಗಳೂರು:ರಾಜ್ಯದಲ್ಲಿ ಮುಂದೆ ಬಿಜೆಪಿ- ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ“ಅವರಿಗೆ ಯಾವ ರೀತಿಯ ಪಂಚೆ, ಅಂಗಿ, ಜುಬ್ಬಾ, ಪ್ಯಾಂಟ್, ಮೇಲಂಗಿ ಬೇಕು ಎಂಬುದನ್ನು ಕಳುಹಿಸಿ ಕೊಡೋಣ. ಮಾಧ್ಯಮದವರ ಕೈಗೆ ಇವೆಲ್ಲವನ್ನು ನೀಡುತ್ತೇನೆ. ನೀವೇ ಅವರಿಗೆ ತಲುಪಿಸಿಬಿಡಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಕುಹಕವಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಮಲಹಾಸನ್ ನಟನೆಯ ಚಿತ್ರ ಕರ್ನಾಟಕದಲ್ಲಿ ಬಿಡುಗಡೆ ಸಂಬಂಧ 24 ಗಂಟೆಯೊಳಗೆ ಸರ್ಕಾರ ವಿವರಣೆ ನೀಡಬೇಕು ಎನ್ನುವ ಸುಪ್ರೀಂ ಕೋರ್ಟ್ ನಿರ್ದೇಶನದ ಬಗ್ಗೆ ಕೇಳಿದಾಗ, “ಕಮಲ ಹಾಸನ್ ವಿಚಾರದಲ್ಲಿ ನ್ಯಾಯಲಯ ನೀಡಿರುವ ಆದೇಶವನ್ನು ನಾವೆಲ್ಲರೂ ಗೌರವದಿಂದ ಪಾಲನೆ ಮಾಡಬೇಕು. ನಾವು ನಮ್ಮ ಮಿತಿಯನ್ನು ಮೀರಬಾರದು, ಶಾಂತಿಯಿಂದ ಇರಬೇಕು ಎಂದು ಕನ್ನಡಪರ ಸಂಘ- ಸಂಸ್ಥೆಗಳಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಯಾರೂ ಸಹ ಕಾನೂನನ್ನು ಕೈಗೆತ್ತಿಕೊಳ್ಳಬಾರದು. ನಮ್ಮ ರಾಜ್ಯ ಶಾಂತಿ ಪ್ರಿಯ ರಾಜ್ಯ” ಎಂದರು.

ಕನ್ನಡಿಗರ ಸ್ವಾಭಿಮಾನವನ್ನ ಯಾರೂ ಹಾಳು ಮಾಡಲು ಸಾಧ್ಯವಿಲ್ಲ:

“ಅವರ ಅಭಿಪ್ರಾಯ ಹೇಳುವುದು ತಪ್ಪಲ್ಲ. ಅವರ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶ ನೀಡಿದ್ದೇವೆ. ಎಲ್ಲಾ ಜಾತಿ, ಸಂಸ್ಕೃತಿ, ಧರ್ಮಗಳನ್ನು ಬೆಂಗಳೂರು ಅರಗಿಸಿಕೊಂಡಿದೆ. ಬೆಂಗಳೂರು ಅಂತರರಾಷ್ಟ್ರೀಯ ನಗರ, ಎಲ್ಲರಿಗೂ ಬೇಕಾದ  ನಗರ. ಕನ್ನಡದ ಜನರು ಹೃದಯ ಶ್ರೀಮಂತಿಕೆ ತೋರಿಸಿಕೊಂಡು ಬಂದಿದ್ದಾರೆ. ನಮ್ಮ ಸ್ವಾಭಿಮಾನವನ್ನು ಯಾರೂ ಸಹ ಹಾಳು ಮಾಡಲು ಸಾಧ್ಯವಿಲ್ಲ. ಕನ್ನಡದ ಪರ ನಾವಿದ್ದೇವೆ. ಆದರೆ ನ್ಯಾಯಲಯದ ತೀರ್ಪಿಗೆ ಗೌರವ ನೀಡಲೇ ಬೇಕು” ಎಂದು ತಿಳಿಸಿದರು.

Related Articles

Comments (0)

Leave a Comment