ರಾಜಭವನಕ್ಕೆ ಬಂದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್
- by Suddi Team
- July 10, 2021
- 14 Views

ಬೆಂಗಳೂರು: ರಾಜ್ಯದ ನಿಯೋಜಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ನಗರಕ್ಕೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ನಿಯೋಜಿತ ರಾಜ್ಯಪಾಲರನ್ನ ಸರ್ಕಾರದ ಪರವಾಗಿ ಕಂದಾಯ ಸಚಿವ ಅಶೋಕ್, ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸ್ವಾಗತಿಸಿದ್ರು.
ವಿಮಾನ ನಿಲ್ದಾಣದಿಂದ ನೇರವಾಗಿ ರಾಜಭವನಕ್ಕೆ ನಿಯೋಜಿತ ರಾಜ್ಯಪಾಲ ಗೆಹ್ಲೋತ್ ಆಗಮಿಸಿದ್ರು. ರಾಜ್ಯಪಾಲ ವಜ್ರದ ಭಾಯ್ ವಾಲಾ ನಿಯೋಜಿತ ರಾಜ್ಯಪಾಲರನ್ನು ಸ್ವಾಗತಿಸಿ ಶುಭ ಕೋರಿದ್ರು. ನಾಳೆ ಬೆಳಗ್ಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರೋ ಸಮಾರಂಭದಲ್ಲಿ ರಾಜ್ಯದ ನೂತನ ರಾಜ್ಯಪಾಲರಾಗಿ ಗೆಹ್ಲೋತ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
Related Articles
Thank you for your comment. It is awaiting moderation.
Comments (0)