ಮುಂದಿನ ಎರಡೂವರೆ ವರ್ಷ ನಾನೇ ಸಿಎಂ: ಬಿಎಸ್ವೈ ವಿಶ್ವಾಸ
- by Suddi Team
- December 31, 2020
- 19 Views

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಆಗಾಗ ಸದ್ದು ಮಾಡ್ತಲೇ ಇದೆ. ಅದ್ರಲ್ಲೂ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂದಪಟ್ಟಂತೆ ಪ್ರತಿಕ್ರಿಯೆ ನೀಡಿರೋ ಸಿಎಂ ಬಿ.ಎಸ್.ಯಡಿಯೂರಪ್ಪ ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಯಾಗಿರ್ತೀನಿ ಅಂತಾ ಸ್ಪಷ್ಟಪಡಿಸಿದ್ದಾರೆ.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್ವೈ, ಕಳೆದ ಒಂದೂವರೆ ವರ್ಷದ ನನ್ನ ಆಡಳಿತದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ನಾನು ಯಾವುದೇ ತಲೆ ಕೆಡೆಸಿಕೊಂಡಿಲ್ಲ. ನಾನಾಯ್ತು, ನನ್ನ ಕೆಲಸ ಆಯ್ತು ಅಂತಾ ರಾಜ್ಯದ ಅಭಿವೃದ್ಧಿ ಬಗ್ಗೆ ಗಮನ ಕೊಟ್ಟಿದ್ದೇನೆ. ಈಗಾಗಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಈ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಹೀಗಾಗಿ ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿ ಎಂದರು.
ಎರಡೂವರೆ ವರ್ಷ ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ. ಹೀಗಾಗಿ ಇದರಲ್ಲಿ ಯಾವುದೇ ಗೊಂದಲ ಇಲ್ಲ. ಶಾಸಕರು, ಸಚಿವರು ಅಥವಾ ಯಾರು ನಾಯಕತ್ವ ಬದಲಾವಣೆ ಬಗ್ಗೆ ಮಾತಾಡ್ತಿಲ್ಲ. ಈ ಬಗ್ಗೆ ಗೊಂದಲ ಇರೋದು ಕೇವಲ ಮಾಧ್ಯಮಗಳಿಗೆ ಮಾತ್ರ ಎಂದರು.
Related Articles
Thank you for your comment. It is awaiting moderation.
Comments (0)