ಕಡಲ ಕೊರೆತ ಹೆಚ್ಚಳ,ತಡೆಗೋಡೆ ನಿರ್ಮಾಣ: ಕೋಟಾ ಶ್ರೀನಿವಾಸ ಪೂಜಾರಿ
- by Suddi Team
- June 2, 2020
- 114 Views
ಮಂಗಳೂರು: ಕಡಲಿನ ಅಬ್ಬರ, ತೀವ್ರತೆ ಜಾಸ್ತಿಯಾಗಿರುವ ಹಿನ್ನೆಲಯಲ್ಲಿ,ಸರಕಾರದಿಂದ ಯಾವ ಯಾವ ಕಾರ್ಯ ರೂಪಿಸ ಬೇಕು, ಮತ್ತು ಜಿಲ್ಲಾಧಿಕಾರಿ ಮತ್ತು ಬಂದರು ಇಲಾಖೆ ಎ.ಡಿ.ಬಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಡೆಗೋಡೆ ಹೇಗೆ ನಿರ್ಮಿಸುವುದು ಮತ್ತು ತುರ್ತಾಗಿ ಯಾವ ಕಾರ್ಯ ಮಾಡಬೇಕುಂಬುದರ ಗಮನ ಕೊಡುತ್ತೇನೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.
ಸೋಮೇಶ್ವರ ಉಚ್ಚಿಲ, ಬಟ್ಟಪ್ಪಾಡಿ, ಉಳ್ಳಾಲ ಮೊಗವೀರ ಪಟ್ನ, ಕೈಕೋ, ಹಿಲರಿಯ ನಗರ,ಪ್ರದೇಶಗಳಲ್ಲಿ ಕಡಲಿನ ಅಬ್ಬರ ಜಾಸ್ತಿಯಾಗಿರುವ ಹಿನ್ನೆಲಯಲ್ಲಿ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಕೋಟಾ,ಸ್ವಾಭಾವಿಕವಾಗಿ ಕಡಲ್ಕೊರೆತದಿಂದಾಗಿ ಅಲ್ಲಿಯ ಮೀನುಗಾರರಿಗೆ, ಮೀನುಗಾರಿಕಾ ವೃತ್ತಿಯಲ್ಲಿ ತೊಡಗಿರುವ ಅನೇಕ ಕುಟುಂಬಗಳಿಗೆ ತೊಂದರೆ ಆದ ಹಿನ್ನೆಲೆಯಲ್ಲಿ ತುರ್ತಾಗಿ ತಡೆಗೋಡೆ ಮಾಡಬೇಕಾದ ಅಗತ್ಯವಿದೆ. 230 ,ಕೋಟಿ ಅನುದಾನದಲ್ಲಿ ಕಡಲ್ಕೊರೆತ ಕಾಮಗಾರಿಯು ಪ್ರಗತಿಯಲ್ಲಿದೆ, ಒಟ್ಟಾರೆಯಾಗಿ ಮೀನುಗಾರರು ಸಂಕಷ್ಟದಿಂದ ಪಾರಾಗಬೇಕೆಂಬುದು ಸರಕಾರದ ಆಶಯವಾಗಿದೆ ಅದಕ್ಕೆ ಅಗತ್ಯ ಕ್ರಮವಹಿಸಿವುದಾಗಿ ತಿಳಿಸಿದರು.
Related Articles
Thank you for your comment. It is awaiting moderation.


Comments (0)