ಜಂಟಿ ಅಧಿವೇಶನಕ್ಕೆ ಹಾಜರಾಗಿ: ಶಾಸಕರಿಗೆ ಸಮನ್ಸ್ ಜಾರಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಚೊಚ್ಚಲ ಬಜೆಟ್ ಮಂಡಿಸಲು ಪೂರಕವಾಗಿ ಜುಲೈ 2 ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಜಂಟಿ ಅಧಿವೇಶನದಲ್ಲಿ ಭಾಗವಹಿಸುವಂತೆ ಎಲ್ಲ ಶಾಸಕರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಸ್ಪೀಕರ್ ಕೆ ಆರ್ ರಮೇಶ ಕುಮಾರ್ ಸೂಚನೆ ಮೇರೆಗೆ ವಿಧಾನಸಭೆ ಕಾರ್ಯದರ್ಶಿ ಎಸ್ ಮೂರ್ತಿ ಸಮನ್ಸ್ ಜಾರಿಗೊಳಿಸಿದ್ದು,ಜುಲೈ 2 ರಂದು ಮಧ್ಯಾಹ್ನ 12.30ಕ್ಕೆ ವಿಧಾನಸೌಧದ ವಿಧಾನಸಭೆಯ ಸಭಾಂಗಣದಲ್ಲಿ ಜಂಟಿ ಅಧಿವೇಶನ ಆರಂಭವಾಗಲಿದೆ,ರಾಜ್ಯಪಾಲ ವಜುಭಾಯ್ ವಾಲಾ ಭಾಷಣ ಮಾಡಲಿದ್ದು ಎಲ್ಲಾ ಶಾಸಕರು ಹಾಜರಿರುವಂತೆ ಸೂಚನೆ ನೀಡಲಾಗಿದೆ.

15ನೇ ವಿಧಾನಸಭೆಯ ಮುಂದುವರೆದ ಅಧಿವೇಶನ ಇದಾಗಿದ್ದು, ಜುಲೈ 5 ರಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಬಜೆಟ್ ಮಂಡಿಸಲಿದ್ದಾರೆ.

Related Articles

Comments (0)

Leave a Comment