ಒಂದು ವರ್ಷದ ರಾಜ್ಯ ಸರ್ಕಾರದ ಸಾಧನೆಗಳನ್ನು ನಾಡಿನ ಜನರಿಗೆ ತಿಳಿಸಲು ಪಕ್ಷದ ವತಿಯಿಂದ ವಿವಿಧ ಕಾರ್ಯಕ್ರಮ
- by Suddi Team
- July 25, 2020
- 8 Views

ಬೆಂಗಳೂರು: ಒಂದು ವರ್ಷದ ರಾಜ್ಯ ಸರ್ಕಾರದ ಸಾಧನೆಗಳನ್ನು ನಾಡಿನ ಜನರಿಗೆ ತಿಳಿಸಲು ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಗಳನ್ನು ಮನೆ-ಮನೆ ಸಂಪರ್ಕ, ಸಸಿ ನೆಡುವ ಅಭಿಯಾನ, ವರ್ಚುವಲ್ ಸಭೆಗಳನ್ನು ರಾಜ್ಯದಾದ್ಯಂತ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಾ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಜುಲೈ 26 ಕ್ಕೆ ಒಂದು ವರ್ಷ ಪೂರೈಸಿದ ಸಂದರ್ಭದಲ್ಲಿ ಹಲವಾರು ಸವಾಲುಗಳು ಹಾಗೂ ಕೊರೋನಾ ನಿರ್ವಹಣೆಯೊಂದಿಗೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜುಲೈ 27 ರಂದು ಬೆಳಗ್ಗೆ 11 ಕ್ಕೆ ವಿಧಾನಸೌಧದಲ್ಲಿ ಒಂದು ವರ್ಷದ ರಾಜ್ಯ ಸರ್ಕಾರದ ಸಾಧನೆಗಳ ಕುರಿತು “ಜನರಿಗೆ ಸರ್ಕಾರದ ವರ್ಷದ ವರದಿ” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಪಕ್ಷದ ಪದಾಧಿಕಾರಿಗಳು ಸರ್ಕಾರದ ಸಾಧನೆಯ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ ಎಂದರು.
• ಜುಲೈ 28 ರಿಂದ ಪ್ರಾರಂಭವಾಗಿ ಮಳೆಗಾಲ ಅಂತ್ಯಗೊಳ್ಳುವ ವರೆಗೆ ರಾಜ್ಯದ ಎಲ್ಲ 58,000 ಬೂತಗಳಲ್ಲಿ ಸರ್ಕಾರದ ಸಾಧನೆಯ ಜೊತೆಗೆ ಪರಿಸರ ಜಾಗೃತಿಗಾಗಿ ಒಂದು ಕೋಟಿಗಿಂತ ಹೆಚ್ಚು ಸಸಿ ನೆಡುವ ಅಭಿಯಾನ ರಾಜ್ಯಾದ್ಯಂತ ನಡೆಯಲಿದೆ.
ಜುಲೈ 29-31 ರ ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸಲು ರಾಜ್ಯಾದ್ಯಂತ ಸುಮಾರು 50 ಲಕ್ಷ ಕ್ಕಿಂತ ಹೆಚ್ಚು ಮನೆ-ಮನೆ ಸಂಪರ್ಕ ಅಭಿಯಾನ ನಡೆಯಲಿದೆ. ಆಗಸ್ಟ್ 1 ರಂದು ಸಂಜೆ 6 ಕ್ಕೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸರ್ಕಾರದ ಸಾಧನೆಯ ಅಂಗವಾಗಿ ವರ್ಚುವಲ್ ಸಭೆ ನಡೆಯಲಿದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯ ಸರ್ಕಾರದ ಒಂದು ವರ್ಷದ “ಸಾಧನಾ ಸಂವಾದ” ಮಾಡಿದ್ದಾರೆ, ಈ ಸಂದರ್ಭದಲ್ಲಿ ರಾಜ್ಯದ 1 ಕೋಟಿ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರುಗಳಾದ, ಸಂಸದ ಪಿ.ಸಿ.ಮೋಹನ್, ನಿರ್ಮಲ್ ಕುಮಾರ ಸುರಾನಾ ಮತ್ತು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎ.ಎಚ್.ಆನಂದ್ ರವರು ಉಪಸ್ಥಿತರಿದ್ದರು,
Related Articles
Thank you for your comment. It is awaiting moderation.
Comments (0)