ಸುಗ್ರೀವಾಜ್ಞೆ ಹಿಂಪಡೆಯದಿದ್ರೆ ಬೀದಿಗಳಿದು ಹೋರಾಟ ಮಾಡ್ತೀವಿ: ಎಚ್ಡಿಡಿ ಗುಡುಗು
- by Suddi Team
- July 28, 2020
- 14 Views

ಬೆಂಗಳೂರು: ವರ್ಷಾಚರಣೆ ಸಂಭ್ರಮದಲ್ಲಿರೋ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಸಮಧಾನ ವ್ಯಕ್ತಪಡಿಸಿದ್ದಾರೆ. ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ, ಕೈಗಾರಿಕಾ ಕಾಯ್ದೆಗಳಿಗೆ ತಿದ್ದುಪಡಿ ತಂದಿರೋ ಸರ್ಕಾರದ ವಿರುದ್ಧ ಎಚ್ಡಿಡಿ ಕಿಡಿಕಾರಿದ್ರು.
ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಎಚ್ಡಿಡಿ, ರೈತ ವಿರೋಧಿ, ಕಾರ್ಮಿಕ ವಿರೋಧಿ ತಿದ್ದುಪಡಿಗಳ ವಿರುದ್ಧ ಸಿಎಂಗೆ ಪತ್ರ ಬರೆದ್ರೂ ಏನು ಪ್ರಯೋಜನವಾಗಿಲ್ಲ. ಸುಗ್ರೀವಾಜ್ಞೆ ಮೂಲಕ ಕಾಯ್ದೆಗಳನ್ನು ಜಾರಿಗೆ ತಂದಿದ್ದು ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು ಇಲ್ಲದಿದ್ರೆ ಬೀದಿಗಿಳಿದು ಹೋರಾಟ ಮಾಡ್ತೀವಿ ಅಂತಾ ಎಚ್ಚರಿಕೆ ನೀಡಿದ್ರು.
ರೈತರನ್ನು, ಕಾರ್ಮಿಕರನ್ನು ಬೀದಿಗೆ ತಂದಿರೋ ಕಾಯ್ದೆಗಳ ವಿರುದ್ಧ ಜೆಡಿಎಸ್ ಹೋರಾಟ ನಡೆಸಲಿದೆ. ಈ ಕುರಿತು ಆಗಸ್ಟ್ 1ಕ್ಕೆ ರಾಜ್ಯದ ಎಲ್ಲಾ ತಾಲ್ಲೂಕುಗಳಿಂದ ಒಬ್ಬೊಬ್ಬ ರೈತನ ಸಭೆ ಕರೆಯಲಾಗಿದೆ. ಸಭೆಯಲ್ಲಿ ಹೋರಾಟದ ಕುರಿತು ರೂಪುರೇಷೆ ಸಿದ್ಧಪಡಿಸಲಾಗುವುದು ಅಂತಾ ತಿಳಿಸಿದ್ರು.
Related Articles
Thank you for your comment. It is awaiting moderation.
Comments (0)