ನಂಗೂ ಯಡಿಯೂರಪ್ಪ ಅಷ್ಟು ಅನುಭವ ಆಗಿದೆ, ನಾನೂ ರಾಜ್ಯವಾಳಬೇಕು; ಉಮೇಶ್ ಕತ್ತಿ

ಬೆಂಗಳೂರು: ನಾನೂ 8 ಬಾರಿ ಶಾಸಕನಾಗಿದ್ದೇನೆ. ನಾನೂ ಸಿಎಂ ಆಗಿ ರಾಜ್ಯ ಆಳಬೇಕು ಅಂತ ಆಸೆ ಇದೆ.ನಾನೂ ಯಡಿಯೂರಪ್ಪ ಸಮನಾಗಿದ್ದೇನೆ. ನನಗೆ ಇನ್ನೂ 15 ವರ್ಷ ಅವಕಾಶ ಇದೆ. ಯಾವತ್ತಾದರೂ ಒಂದು ಒಂದು ದಿನ ಸಿಎಂ ಆಗ್ತಿನಿ ಅನ್ನೊ ಭರವಸೆ ಇದೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತಾಡ್ತಾ,
ಪಕ್ಷದ ಹೈಕಮಾಂಡ್ ಏನು ಹೇಳುತ್ತದೆ ಅದನ್ನು ಮುಖ್ಯಮಂತ್ರಿ ಗಳು ಪಾಲನೆ ಮಾಡುತ್ತಾರೆ. ನಾವೂ ಮಾಡುತ್ತೇವೆ.
ಯಡಿಯೂರಪ್ಪ ಅವರಿಗೆ ಗೌರವಯುತ ನಿರ್ಗಮನವಾಗಬೇಕು. ಅವರು ಪಕ್ಷದ ತೀರ್ಮಾನವನ್ನು ಗೌರವಿಸುತ್ತಾರೆ. ಅವರು ಪಕ್ಷಕ್ಕಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ ಪಕ್ಷವೂ ಅವರಿಗೆ ಗೌರವ ಕೊಡುತ್ತದೆ ಎಂದ್ರು.

ಉತ್ತರ ಕರ್ನಾಟಕ ಭಾಗದವರೇ ಸಿಎಂ ಆಗಬೇಕು ಎನ್ನುವ ಬೇಡಿಕೆ ಇದೆ. ಆ ಭಾಗದ. ಯಾವುದೇ ಸಮುದಾಯದವರು ಸಿಎಂ ಆದರೂ ಸಹಕಾರ ನೀಡುತ್ತೇವೆ. ಆ ಭಾಗದಲ್ಲಿ ಲಿಂಗಾಯತ ಸಮುದಾಯ ಶಾಸಕರು ಹೆಚ್ಚಿದ್ದಾರೆ. ಯಾರನ್ನೇ ಸಿಎಂ ಮಾಡಿದರೂ ಸ್ವಾಗತವಿದೆ ಎಂದ್ರು.

ನಾನು ಈಗ ಹೈಕಮಾಂಡ್ ಭೇಟಿಗೆ ಹೋಗಲ್ಲ.
ಬಿಜೆಪಿಯಲ್ಲಿ 75 ವರ್ಷದ ಲಿಮಿಟ್ ಇದೆ. ಯಡಿಯೂರಪ್ಪ ಅವರಿಗೆ 80 ವರ್ಷ ಹತ್ತಿರ ಆಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಅವರೂ ಬದ್ದರಾಗಿತ್ತಾರೆ. ನಾವೂ ಬದ್ದರಾಗಿರುತ್ತೇವೆ ಎಂದ್ರು.

Related Articles

Comments (0)

Leave a Comment