- ಧಾರ್ಮಿಕ
- ಮುಖ್ಯ ಮಾಹಿತಿ
- ಸಾಮಾಜಿಕ
- Like this post: 0
ಗೋಕರ್ಣ ದೇವಾಲಯ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಮುಂದುವರೆಯಲಿದೆ: ಹೈಕೋರ್ಟ್
- by Suddi Team
- August 10, 2018
- 135 Views
ಬೆಂಗಳೂರು: ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಪಡಿಸಿದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
2008ರ ಆಗಸ್ಟ್ 12ರಂದು ಅಂದಿನ ಸರ್ಕಾರ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಾಲಕೃಷ್ಣ ದೀಕ್ಷಿತ್ ಎನ್ನುವರು ಹೈಕೋರ್ಟ್ನಲ್ಲಿ
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ರಾಜ್ಯ ಸರ್ಕಾರದ ಆದೇಶದಲ್ಲಿ ಲೋಪದೋಷಗಳಿವೆ. ಮಹಾಬಲೇಶ್ವರ ದೇವಸ್ಥಾನವನ್ನು ಧಾರ್ಮಿಕ ದತ್ತಿ ಪಟ್ಟಿಯಿಂದ ಕೈಬಿಟ್ಟಿದ್ದು ಸರಿಯಲ್ಲ. ಹೀಗಾಗಿ, ಬಿಎಸ್ವೈ ಸರಕಾರದ ಆದೇಶವನ್ನು ರದ್ದುಗೊಳಿಸುತ್ತಿದ್ದೇವೆ. ಗೋಕರ್ಣ ದೇವಸ್ಥಾನವು ಧಾರ್ಮಿಕ ದತ್ತಿ ದೇಗುಲವಾಗಿ ಮುಂದುವರಿಯಲಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ತಿಳಿಸಿದೆ.
ಗೋಕರ್ಣ ದೇವಸ್ಥಾನಕ್ಕೆ ತತ್ಕ್ಷಣವೇ ಡಿಸಿ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆಯಾಗಬೇಕು ಎಂದು ಆದೇಶಿಸಿರುವ ನ್ಯಾಯಾಲಯ, ಸಮಿತಿಯ ಸಲಹೆಗಾರರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರನ್ನು ನೇಮಿಸಿದೆ. ಸೆ. 10ರಂದು ಉಸ್ತುವಾರಿ ಸಮಿತಿ ಅಸ್ತಿತ್ವಕ್ಕೆ ಬರಲಿದ್ದು, ಅಲ್ಲಿಯವರೆಗೂ ಗೋಕರ್ಣ ಕ್ಷೇತ್ರವು ರಾಮಚಂದ್ರಾಪುರ ಮಠದ ಸುಪರ್ದಿಯಲ್ಲೇ ಇರಲಿದೆ. ಅಷ್ಟರೊಳಗೆ ಗೋಕರ್ಣ ದೇವಸ್ಥಾನದ ಸ್ಥಿರಾಸ್ತಿ, ಚರಾಸ್ತಿ ಪಟ್ಟಿಯನ್ನು ತಯಾರಿಸಿ ಎರಡು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾ. ಅರವಿಂದ್ ಕುಮಾರ್ ಮತ್ತು ನ್ಯಾ. ಬಿ.ವಿ. ನಾಗರತ್ನ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ ಸೂಚಿಸಿದೆ.
Related Articles
Thank you for your comment. It is awaiting moderation.
Comments (0)