ಯಾವುದೇ ಜಾತಿ ಕುರಿತು ಹೇಳಿಕೆ ಕೊಟ್ಟಿರುವುದಿಲ್ಲ; ಶ್ರೀ ರಂಭಾಪುರಿ ಜಗದ್ಗುರುಗಳ ಸ್ಪಷ್ಟಿಕರಣ
- by Suddi Team
- July 29, 2025
- 68 Views

ಶ್ರೀ ರಂಭಾಪುರಿ ಪೀಠ(ಬಾಳೆಹೊನ್ನೂರು):ಭದ್ರಾವತಿ ಹಾಗು ದಾವಣಗೆರೆ ಕಾರ್ಯಕ್ರಮದ ಆಶೀರ್ವಚನದ ವೇಳೆ ನಮ್ಮ ಸಂಸ್ಕೃತಿ ಪರಂಪರೆ ಅದರ್ಶಗಳ ಬಗ್ದೆ ಮಾತನಾಡಿದ್ದೇವೆಯೇ ಹೊರತು ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿಲ್ಲ,ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಲಿ ಅಲ್ಲ ಸಲ್ಲದ ಮಾತುಗಳಾಗಲಿ ಆಡಿಲ್ಲ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಸ್ಪಷ್ಟಪಡಿಸಿದ್ದಾರೆ.
ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿ ಕೆಲವು ಪತ್ರಿಕೆಗಳಲ್ಲಿ ಬಂದಿರುವ ವರದಿಯನ್ನು ಆಧರಿಸಿ ಭದ್ರಾವತಿಯಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದ್ದಾರೆಂಬ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿರುವ ಜಗದ್ಗುರುಗಳು,’ಭದ್ರಾವತಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಭದ್ರಾವತಿ ತಾಲೂಕಾ ಘಟಕದಿಂದ ಜರುಗಿದ ಸಮಾರಂಭದಲ್ಲಿ ಜಾತಿಯ ಮಠಗಳಿಂದ ಕಲುಷಿತ ವಾತಾವರಣ ಈ ಹೇಳಿಕೆ ಹಿನ್ನೆಲೆಯಲ್ಲಿ ದಲಿತ ಹಿಂದುಳಿದ ಮಠಾಧೀಶರು ಸುದ್ದಿಗೋಷ್ಟಿ ಮಾಡಿರುವುದು ನೋವಿನ ಸಂಗತಿ, ವೀರಶೈವ ಲಿಂಗಾಯತ ಸಮುದಾಯದ ಕಾರ್ಯಕ್ರಮದಲ್ಲಿ ನಮ್ಮ ಸಂಸ್ಕೃತಿ ಪರಂಪರೆ ಅದರ್ಶಗಳ ಬಗೆಗೆ ಮಾತನಾಡಿದ್ದೇವೆ ಹೊರತು ಅನ್ಯ ಬೇರೆ ಯಾವುದೇ ಜಾತಿ ಕುರಿತು ಯಾವುದೇ ಹೇಳಿಕೆ ಕೊಟ್ಟಿರುವುದಿಲ್ಲ. ದಲಿತ ಹಿಂದುಳಿದ ಮಠಾಧೀಶರು ತಪ್ಪು ಗ್ರಹಿಕೆ ಮಾಡಿಕೊಂಡು ಗೋಷ್ಠಿ ನಡೆಸಿರುವುದಕ್ಕೆ ವಿಷಾಧಿಸುತ್ತೇವೆ. ಅವರವರ ಸಮುದಾಯದ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪವಾಗಲಿ ಅಲ್ಲ ಸಲ್ಲದ ಮಾತುಗಳಿಲ್ಲವೆಂಬುದನ್ನು ಸ್ಪಷ್ಟಪಡಿಸುತ್ತೇವೆ’ ಎಂದು ತಿಳಿಸಿದ್ದಾರೆ.
Related Articles
Thank you for your comment. It is awaiting moderation.
Comments (0)