ಬೆಂಗಳೂರು ಜಲಮಂಡಳಿ: ಸೆಪ್ಟೆಂಬರ್ 07 ರಂದು ಪೂರ್ವ-1 ಉಪವಿಭಾಗದಲ್ಲಿ ನೀರಿನ ಅದಾಲತ್  

ಬೆಂಗಳೂರು: ಬೆಂಗಳೂರು ಜಲಮಂಡಲಿಯ (ಪೂರ್ವ-1) ಉಪವಿಭಾಗದಲ್ಲಿ ದಿ:07.09.2018 ರಂದು ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್‍ಅನ್ನು ಬೆಳಿಗ್ಗೆ 9.30 ರಿಂದ 11:00 ಗಂಟೆಯವರೆಗೆ ನಡೆಸಲಾಗುತ್ತದೆ.

ದಿನಾಂಕ: 07.09.2018 ರಂದು (ಪೂರ್ವ-1) ಉಪವಿಭಾಗ ವ್ಯಾಪ್ತಿಗೆ ಬರುವ ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರ, ಓ.ಎಂ.ಬಿ.ಆರ್ ಲೇಔಟ್, ಮತ್ತು ಹೆಚ್.ಬಿ.ಆರ್ ಲೇಔಟ್ ಸೇವಾಠಾಣೆಗಳಿಗೆ ಸಂಬಂಧಿಸಿದ ವಿವಾದಗಳನ್ನು 1ನೇ ಬ್ಲಾಕ್, ಹೆಚ್.ಆರ್.ಬಿ.ಆರ್ ಲೇಔಟ್, ಕಲ್ಯಾಣ ನಗರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ಕಾರ್ಯನಿರ್ವಾಹಕ ಅಭಿಯಂತರರು (ಪೂರ್ವ)22945158. ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಪೂರ್ವ-1) ಉಪವಿಭಾಗ-22945170. ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರುನಿರ್ವಹಣಾ ಕೇಂದ್ರದ ದೂರವಾಣಿ ಸಂಖ್ಯೆ-22238888, ಸಹಾಯವಾಣಿ 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ-8762228888 ಗೆ ಸಂಪರ್ಕಿಸಬಹುದಾಗಿದೆ.

ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯ ಬಳಸಿಕೊಳ್ಳ ಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Related Articles

Comments (0)

Leave a Comment