ರಾಜ್ಯದ ಅನುಮೋದನೆ ನಂತರ ನಮ್ಮ ಮೆಟ್ರೋ ಹಂತ-2,3ಎ ಪ್ರಸ್ತಾವನೆ ಪರಿಗಣನೆ: ಮನೋಹರ್ ಲಾಲ್

ಬೆಂಗಳೂರು: ರಾಜ್ಯ ಸರ್ಕಾರದ ಅನುಮೋದನೆ ಬಳಿಕ ಬೆಂಗಳೂರಿನ ನಮ್ಮ ಮೆಟ್ರೋ ಹಂತ-2 ಮತ್ತು 3ಎ ಪ್ರಸ್ತಾವನೆಗಳನ್ನು ಕೇಂದ್ರ ಸರ್ಕಾರವು ಪರಿಗಣಿಸಲಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು ಮತ್ತು ಇಂಧನ ಸಚಿವ ಮನೋಹರ್ ಲಾಲ್ ತಿಳಿಸಿದ್ದಾರೆ.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳು ಮತ್ತು ಇಂಧನ ಸಚಿವಮನೋಹರ್ ಲಾಲ್ ಇಂದು ಬೆಂಗಳೂರಿನಲ್ಲಿ ವಿವಿಧ ನಗರ ಯೋಜನೆಗಳ ಕಾರ್ಯಾಚರಣೆಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ವಿವಿಧ ಯೋಜನೆ ಕಾರ್ಯಾಚರಣೆಗಳ ಪ್ರಗತಿಯ ಬಗ್ಗೆ ಕೇಂದ್ರ ಸಚಿವರು ತೃಪ್ತಿ ವ್ಯಕ್ತಪಡಿಸಿದರು. ರಾಜ್ಯ ಸಚಿವ ಸಂಪುಟವು ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸೂಕ್ತವಾಗಿ ಅನುಮೋದಿಸಿದ ನಂತರ ಬೆಂಗಳೂರು ಮೆಟ್ರೋ ಹಂತ-2 ಯೋಜನೆಯ ಪರಿಷ್ಕೃತ ವೆಚ್ಚದ ಅಂದಾಜನ್ನು ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದರು.

ಬೆಂಗಳೂರು ಮೆಟ್ರೋ ಹಂತ-3 A ಅನುಮೋದನೆಯ ನಂತರ, ಪ್ರಸ್ತುತ ಬೆಂಗಳೂರಿನಲ್ಲಿ ಸುಮಾರು 75 ಕಿ.ಮೀ ಮೆಟ್ರೋ ಜಾಲವು ಕಾರ್ಯನಿರ್ವಹಿಸುತ್ತಿದೆ ಹಾಗೂ ಸುಮಾರು 145 ಕಿ.ಮೀ ಮೆಟ್ರೋ ಜಾಲವು ನಿರ್ಮಾಣ ಹಂತದಲ್ಲಿದೆ. ಇತ್ತೀಚೆಗೆ ಕೆಲವು ತಿಂಗಳ ಹಿಂದೆ, ಕೇಂದ್ರ ಸರ್ಕಾರವು 15,600 ಕೋಟಿ ರೂ. ವೆಚ್ಚದಲ್ಲಿ 45 ಕಿ.ಮೀ ಮೆಟ್ರೋ ಹಂತ-3 ಜಾಲವನ್ನು ಮಂಜೂರು ಮಾಡಿದೆ.ಕರ್ನಾಟಕ ಸರ್ಕಾರವು ಬೆಂಗಳೂರು ಹಂತ-3 A ನ ಪ್ರಸ್ತಾವನೆಯನ್ನು ಸುಮಾರು 28,400 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಸುಮಾರು 37 ಕಿ.ಮೀ.ನ ಪ್ರಸ್ತಾವನೆಯನ್ನು ಸಲ್ಲಿಸಿದೆ. ಹಂತ-3 A ಜಾಲದ ವೆಚ್ಚದ ಅಂದಾಜನ್ನು ತಜ್ಞರುಳ್ಳ ಸಂಸ್ಥೆಯು ಪರಿಶೀಲಿಸಬೇಕಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ನಿಟ್ಟಿನಲ್ಲಿ ನಿರ್ದೇಶನ ನೀಡಿದೆ. ಕರ್ನಾಟಕ ಸರ್ಕಾರದಿಂದ ಉತ್ತರ ಬಂದ ನಂತರ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಅನುಮೋದನೆಗಾಗಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ಹಳೆಯ ತ್ಯಾಜ್ಯದ ರಾಶಿ (ಲೆಗಸಿ ವೇಸ್ಟ್)ಯ ಸಮಸ್ಯೆಗಳನ್ನು ಆದ್ಯತೆಯ ಮೇಲೆ ನಿಭಾಯಿಸಲು  ಸೂಚಿಸಿದರು. ಸಂಸ್ಕರಿಸಿದ ಬಳಸಿದ ನೀರಿನ ಮರುಬಳಕೆಗೆ ಗೌರವಾನ್ವಿತ ಕೇಂದ್ರ ಸಚಿವರು ಒತ್ತು ನೀಡಿದರು. ನಗರ ಪ್ರದೇಶಗಳಲ್ಲಿ ಸಿಹಿನೀರಿನ ಮೂಲಗಳ ಸುಸ್ಥಿರತೆಯನ್ನು ಹೆಚ್ಚಿಸಲು ನೀರಿನ ಮರುಬಳಕೆಯು ಈಗಿನ ಸಮಯದ  ಅಗತ್ಯವಾಗಿದೆ ಎಂದು ಅವರು ಹೇಳಿದರು.

ಸಾಮೂಹಿಕ ಸಾರಿಗೆ ಕ್ಷೇತ್ರಗಳಲ್ಲಿ ಹೆಚ್ಚಿನ ಎಫ್.ಎ.ಆರ್ ಅನ್ನು ಅನುಮತಿಸುವ ಬಗ್ಗೆ ಅವರು ಒತ್ತಿ ಹೇಳುತ್ತಾ, ಇದು ನಗರಗಳನ್ನು ಮರುರೂಪಿಸಲು, ರಸ್ತೆ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕ ಸಾರಿಗೆಯ ಹೆಚ್ಚಿನ ಬಳಕೆಗೆ ಸಹಾಯ ಮಾಡುತ್ತದೆ ಎಂದು ಹೇಳಿದರು.

ಭಾರತ ಸರ್ಕಾರದ ಅನುಮೋದಿತ ಯೋಜನೆಗಳ ಜೊತೆಗೆ, ರಾಜ್ಯದ ನಿಧಿಯ ಅವಶ್ಯಕತೆಯ ಕುರಿತು ಚರ್ಚೆಯ ಸಂದರ್ಭದಲ್ಲಿ, ಗೌರವಾನ್ವಿತ ಕೇಂದ್ರ ಸಚಿವರು ‘ರಾಜ್ಯಗಳಿಗೆ ಬಂಡವಾಳ ಹೂಡಿಕೆಗಾಗಿ ವಿಶೇಷ ಸಹಾಯ ಯೋಜನೆ (ಎಸ್.ಎಸ್.ಎ.ಎಸ್.ಸಿ.ಐ)  2025-26’ ಅಡಿಯಲ್ಲಿ 50 ವರ್ಷಗಳ ಬಡ್ಡಿರಹಿತ ಸಾಲವನ್ನು ಪಡೆಯಲು, ಸುಧಾರಣೆಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವನ್ನು  ಪ್ರೋತ್ಸಾಹಿಸಿದರು.

ಪರಿಶೀಲನೆಯ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನಾ ಸಚಿವ ಬೈರತಿ ಸುರೇಶ್, ಪೌರಾಡಳಿತ ಸಚಿವ ರಹೀಮ್ ಖಾನ್, ವಸತಿ ಸಚಿವ ಬಿ ಝಡ್ ಜಮೀರ್ ಅಹ್ಮದ್ ಖಾನ್, ಇಂಧನ ಸಚಿವ ಕೆ ಜೆ ಜಾರ್ಜ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿತುಷಾರ್ ಗಿರಿನಾಥ್  ಮತ್ತು ಹಿರಿಯ ರಾಜ್ಯ ಅಧಿಕಾರಿಗಳು, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Comments (0)

Leave a Comment