ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡಬೇಕು: ಸಿದ್ದರಾಮಯ್ಯ
- by Suddi Team
- August 23, 2018
- 26 Views

ಮಡಿಕೇರಿ:ಕೇರಳಕ್ಕೆ ಬಂದು ಮಳೆಹಾನಿ ವೀಕ್ಷಿಸಿ ಪರಿಹಾರ ಪ್ರಕಟಿಸಿರುವ ಪ್ರಧಾನಿ ನರೇಂದ್ರ ಮೋದಿ ಇಲ್ಲಿಗೂ ಬಂದು ನೋಡಬೇಕಿತ್ತು. ಈಗಲಾದರೂ ಕೊಡಗಿಗೆ ಭೇಟಿ ನೀಡಿ ಆಗಿರುವ ಹಾನಿ ಪರಿಶೀಲಿಸಿ ಕೇಂದ್ರದಿಂದ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.
ಮಡಿಕೇರಿಯಲ್ಲಿ ಮಳಹಾನಿ ಪರಿಶೀಲನೆ ನಡೆಸಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ,ಭಾರಿ ಮಳೆಯಿಂದ ಹಲವಾರು ಊರುಗಳೇ ಹಾಳಾಗಿವೆ. ಜನ ಆಸ್ತಿಪಾಸ್ತಿ ಕಳೆದುಕೊಂಡಿದ್ದಾರೆ. ರಸ್ತೆ ಸಂಪರ್ಕವೂ ಇಲ್ಲದಂತಾಗಿದೆ. ಸಂತ್ರಸ್ತರಿಗೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ನೂರಾರು ಮಂದಿ ಸಂತ್ರಸ್ತರ ನೆರವಿಗೆ ನಿಂತಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದ್ರು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಮಂತ್ರಿಗಳೂ ಭೇಟಿ ನೀಡಿದ್ದಾರೆ. ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಕೊಡುವುದು ನಮ್ಮ ಸವಾಲು. ಈ ಸಂಬಂಧ ಯೋಜನೆ ರೂಪಿಸುವಂತೆ ವಸತಿ ಸಚಿವರಿಗೆ ಹೇಳಿದ್ದೇನೆ. ಶಾಲಾ ಮಕ್ಕಳಿಗೂ ನೆರವಾಗಲು ಅಧಿಕಾರಿಗಳಿಗೆ ತಿಳಿಸಿದ್ದೇನೆ.ಮುಂದೆ ಈ ರೀತಿ ಅನಾಹುತ
ಅಗದಂತೆ ನೋಡಿಕೊಳ್ಳಲು ತಜ್ಞರ ಸಮಿತಿ ರಚನೆ ಆಗಬೇಕು. ಈ ಸಂಬಂಧ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡುತ್ತೇನೆ ಎಂದ್ರು.
ಸಾವಿರಾರು ಎಕರೆ ಕೃಷಿ ಜಮೀನು ಹಾಳಾಗಿರುವುದರಿಂದ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ. ಅವರಿಗೆ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ನೀಡಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಿಗೆ ತಿಳಿಸಿದ್ದೇನೆ.ಕೃಷಿ ಭೂಮಿ ಕಳೆದುಕೊಂಡವರಿಗೆ ಜಮೀನು ನೀಡುವ ಬಗ್ಗೆಯೂ ಸರ್ಕಾರದ ಜೊತೆ ಮಾತುಕತೆ ನಡೆಸುತ್ತೇನೆ.ಸಂತ್ರಸ್ತರಿಗೆ ಪರಿಹಾರ ಒದಗಿಸುವುದು, ಬೆಳೆ ಹಾನಿ ಬಗ್ಗೆಯೂ ಯೋಜನೆ ರೂಪಿಸಲಾಗುವುದು ಎಂದ್ರು.
ಸರ್ಕಾರ ಪರಿಹಾರ ಕ್ರಮಗಳನ್ನು ಕೈಗೊಂಡಿದೆ. ಅದರ ವೇಗ ಇನ್ನೂ ಹೆಚ್ಚಾಗಬೇಕು.ಮಳೆಯಿಂದ ಹಾನಿಗೊಳಗಾಗಿರುವ ಕೊಡಗಿನಲ್ಲಿ ಮೂಲಭೂತ ಸೌಕರ್ಯಗಳ ಮರು ನಿರ್ಮಾಣ ಆಗಬೇಕು. ಇದಕ್ಕಾಗಿ ಮುಖ್ಯಮಂತ್ರಿ, ಸಂಬಂಧಿಸಿದ ಸಚಿವರೊಂದಿಗೆ ಮಾತುಕತೆ ನಡೆಸುತ್ತೇನೆ. ಸಮನ್ವಯ ಸಮಿತಿ ಸಭೆಯಲ್ಲೂ ಚರ್ಚೆ ಮಾಡುತ್ತೇನೆ ಎಂದ್ರು.
Related Articles
Thank you for your comment. It is awaiting moderation.
Comments (0)