ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಸಿಎಂ ಕುಮಾರಸ್ವಾಮಿ ಕುಟುಂಬ
- by Suddi Team
- August 13, 2018
- 468 Views
ಮಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಕ್ಷೇತ್ರನಾಥ ಶ್ರೀ ಮಂಜುನಾಥೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
ಮೈಸೂರು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಇಂದು ಸಂಜೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ರು. ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ,ಚೆನ್ನಮ್ಮ,ಸಿಎಂ ಎಚ್ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ ಮಂಜುನಾಥ ದೇವಾಲಯಕ್ಕೆ ಭೇಟಿ ನೀಡಿದ್ರು.
ದೇವಾಲಯದ ಆಡಳಿತ ಮಂಡಳಿ ವತಿಯಿಂದ ಕುಮಾರಸ್ವಾಮಿ ಕುಟುಂಬಕ್ಕೆ ಅದ್ದೂರಿ ಸ್ವಾಗತ ಕೋರಲಾಯಿತು.ನಂತರ ಕ್ಷೇತ್ರನಾಥ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ರು.
Related Articles
Thank you for your comment. It is awaiting moderation.


Comments (0)