ರಾಜ್ಯದ ಎಲ್ಲಾ ಶಾಲೆ ಕಾಲೇಜುಗಳ ಪಠ್ಯಕ್ರಮದಲ್ಲಿ ಕೋವಿಡ್-19 ಅರಿವಿನ ಪಾಠ : ಸಚಿವ ಸುರೇಶ್ಕುಮಾರ್
- by Suddi Team
- June 19, 2020
- 111 Views
ಚಾಮರಾಜನಗರ : ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳ ಪಠ್ಯಕ್ರಮಗಳಲ್ಲಿ ಕೋವಿಡ್ 19 ನ ಬಗ್ಗೆ ಕಿರುಹೊತ್ತಿಗೆ ಹೊರತಂದು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ನ್ನು ತಡೆಗಟ್ಟುವ ಹಾಗೂ ನಿಯಂತ್ರಿಸುವ ಸಲುವಾಗಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಕೋವಿಡ್ ಇನ್ನಿತರ ಮಹಾಮಾರಿ ರೋಗಗಳ ಬಗ್ಗೆ ದೇಶ-ವಿದೇಶಗಳು ಕೈಗೊಂಡ ಕ್ರಮಗಳು ಹಾಗೂ ಪರಿಹಾರಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ತಿಳಿಸಿದ್ದಾರೆ.
ಅವರು ಇಂದು ಚಾಮರಾಜನಗರ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ 70 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಹೊರರೋಗಿಗಳ ವಿಭಾಗ ಹಾಗೂ ತುರ್ತುಚಿಕಿತ್ಸಾ ನಿಗಾಘಟಕಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿ ಆಸ್ಪತ್ರೆಗಳಿಗೆ ರೋಗಿಗಳು ಆಗಮಿಸದಾಗ ವೈದ್ಯರು ಹಾಗೂ ಶೂಶ್ರುಕಿಯರು ಅವರನ್ನು ನಗುಮುಖದಿಂದ ಸ್ವಾಗತಿಸಬೇಕು ಎಂದ ಅವರು ಈಗಾಗಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹಾಗೂ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದ ಪ್ರಾಯೋಗಿಕ ಪ್ಲಾಸ್ಮಾ ಚಿಕಿತ್ಸೆಯು ಯಶಸ್ಸು ಕಂಡಿದ್ದು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪ್ರಾರಂಭಿಕ ಪ್ರಯತ್ನಕ್ಕೆ ಉತ್ತೇಜನ ದೊರಕಿದೆ. ಈ ನಿಟ್ಟಿನಲ್ಲಿ ರಾಜ್ಯದ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ವಿಧಿ ವಿಜ್ಞಾನ ಇಲಾಖೆಗಳ ವೈದ್ಯರ ತಜ್ಞರ ಸಮಿತಿಯನ್ನು ಸರ್ಕಾರ ಕೂಡಲೇ ನೇಮಕ ಮಾಡಿ, ಅವರ ನೇತೃತ್ವದಲ್ಲಿ ರಾಜ್ಯದೆಲ್ಲೆಡೆ ಪ್ಲಾಸ್ಮಾ ಚಿಕಿತ್ಸೆಯನ್ನು ಅಗತ್ಯವಿರುವ ಎಲ್ಲಾ ಆಸ್ಪತ್ರೆಗಳಲ್ಲಿ ವಿಸ್ತರಿಸಲು ಚಿಂತನೆ ನಡೆದಿದೆ ಎಂದು ಅವರು ತಿಳಿಸಿದರು.
ವಿಶ್ವವ್ಯಾಪ್ತಿ ಮಾರಕವಾಗಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾದ ಬಗ್ಗೆ ಶಾಲಾ ಹಾಗೂ ಕಾಲೇಜು ಮಟ್ಟದ ವಿದ್ಯಾರ್ಥಿಗಳಿಗೆ ಕೋವಿಡ್ 19 ಹಾಗೂ ಇತರ ಮಹಾ ಮಾರಿ ರೋಗಗಳ ಬಗ್ಗೆ ಸಾಕಷ್ಟು ಅರಿವು ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರವು ಕಿರುಹೊತ್ತಿಗೆಯನ್ನು ಹೊರತಂದು ಅದನ್ನು ಪಠ್ಯಕ್ರಮಗಳಲ್ಲಿ ಅಳವಡಿಸಲಾಗುವುದು. ಈ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಇಲಾಖೆಯು ಕಾರ್ಯೋನ್ಮುಖವಾಗಿದೆ ಎಂದು ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.
ಈ ಸಂದರ್ಭದಲ್ಲಿ ಶಾಸಕ ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಲ್ಲಾಪೋಲೀಸ್ ವರೀಷ್ಠಾಧಿಕಾರಿ ಆನಂದ್ಕುಮಾರ್, ಜಿಲ್ಲಾ ವೈದ್ಯಾಧಿಕಾರಿ ಡಾ.ಕೃಷ್ಣಪ್ರಸಾದ್, ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ.ಸಂಜೀವ್ ಸೇರಿದಂತೆ ಇತರರು ಹಾಜರಿದ್ದರು.
Related Articles
Thank you for your comment. It is awaiting moderation.


Comments (0)