ಡಿ.ಕೆ ಶಿವಕುಮಾರ್ ಒಬ್ಬ ದೊಡ್ಡ ಕಳ್ಳ : ಸಿ .ಪಿ ಯೋಗೇಶ್ವರ್
- by Suddi Team
- August 24, 2020
- 14 Views

ರಾಮನಗರ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಮಾತಿನ ಸಮರ ಮುಂದುವರೆಸಿದ್ದಾರೆ. ಡಿಕೆ ಶಿವಕುಮಾರ್ ದೊಡ್ಡ ಕಳ್ಳ ಅವರ ಫೋನ್ ಕದ್ದಾಲಿಕೆ ಮಾಡಿ ನಮ್ಮ ಸರ್ಕಾರ ಯಾವ ರಾಜ್ಯ ಗೆಲ್ಲಬೇಕಾಗಿದೆ ಎಂದು ಸಿ .ಪಿ ಯೋಗೇಶ್ವರ್ ಗುಡುಗಿದ್ದಾರೆ .
ಚನ್ನಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ
ಸಿ.ಪಿ ಯೋಗೇಶ್ವರ್ ,ಡಿ.ಕೆ ಶಿವಕುಮಾರ್ ಫೋನ್ ಟ್ಯಾಪಿಂಗ್ ಆರೋಪ ಮಾಡುತ್ತಿದ್ದಾರೆ ಆದರೆ ಅವರೇ ಒಬ್ಬ ದೊಡ್ಡ ಕಳ್ಳ ಅವರು ಇನ್ನೊಬ್ಬರ ಮೇಲೆ ಆರೋಪ ಮಾಡೋಕೆ ಏನಿದೆ ? ಟೆಲಿಫೋನ್ ಕದ್ದಾಲಿಕೆ ಆರೋಪ ಶುದ್ಧ ಸುಳ್ಳು ಅವರ ಫೋನನ್ನು ಯಾವ ಉದ್ದೇಶಕ್ಕಾಗಿ ಕದ್ದಾಲಿಕೆ ಮಾಡಬೇಕು ?
ಅದರ ಅಗತ್ಯ ಏನಿದೆ ?? ಬಿಜೆಪಿಗೆ ಅಥವಾ ರಾಜ್ಯ ಸರ್ಕಾರಕ್ಕೆ ಏನು ಲಾಭವಿದೆ ?ಅವರ ಫೋನ್ ಕದ್ದಾಲಿಕೆ ಮಾಡಿ ಯಾವ ರಾಜ್ಯ ಗೆಲ್ಲಬೇಕಾಗಿದೆ ಎನ್ನುವ ಮೂಲಕ ಡಿಕೆ ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
ಡಿಕೆ ಶಿವಕುಮಾರ್ ಅವರೇ ಈ ಹಿಂದೆ ಫೋನ್ ಟ್ಯಾಪಿಂಗ್ ಮಾಡಿಸಿ ಅದನ್ನ ನಮ್ಮ ಪಕ್ಷದ ಮೇಲೆ ಆರೋಪ ಹೊರಿಸಿದ್ದರು .ರಾಜ್ಯದ ಜನರ ಗಮನ ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಅವರು ಇಂತಹ ನಿರಾಧಾರ ಆರೋಪ ಮಾಡುತ್ತಿದ್ದಾರೆ ಎಂದ ಸಿ .ಪಿ ಯೋಗೇಶ್ವರ್ ಫೋನ್ ಕದ್ದಾಲಿಕೆ ಮಾಡುವುದರಲ್ಲಿ ಡಿಕೆ ಶಿವಕುಮಾರ್ ತುಂಬಾ ಅನುಭವಿ ಎಂದು ಛೇಡಿಸಿದ್ದಾರೆ.
ಇನ್ನು ನರೇಗಾ ಹಣವನ್ನು ಕನಕಪುರ ದವರು ಜಾಸ್ತಿ ಪಡೆಯುತ್ತಿದ್ದಾರೆ ಇದರಿಂದಾಗಿ ಮಾಗಡಿ ಚನ್ನಪಟ್ಟಣ ರಾಮನಗರ ತಾಲೂಕುಗಳಿಗೆ ಅನ್ಯಾಯವಾಗುತ್ತಿದೆ ಅಧಿಕಾರಿಗಳು ಹಣವನ್ನು ಮೂರು ಜಿಲ್ಲೆಗಳಿಗೆ ಸಮಾನವಾಗಿ ಹಂಚಿಕೆ ಮಾಡಬೇಕು ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುವ ಸಮಯಕ್ಕೆ ಸರಿಯಾಗಿ ಒಬ್ಬರು ಅಧಿಕಾರಿಗಳ ಸಭೆ ಕರೆಯುತ್ತಾರೆ ಸರ್ಕಾರ ಹಣ ಬಿಡುಗಡೆ ಮಾಡುತ್ತಿದ್ದಂತೆ ಕನಕಪುರದವರು ಹಣ ಡ್ರಾ ಮಾಡಿಕೊಳ್ಳುತ್ತಾರೆ ಎಂದು ಯೋಗೇಶ್ವರ್ ಲೋಕಸಭಾ ಸದಸ್ಯ ಡಿ.ಕೆ.ಸುರೇಶ್ ಹೆಸರು ಹೇಳದೆ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
Related Articles
Thank you for your comment. It is awaiting moderation.
Comments (0)