ಪೂರ್ವ ವಲಯ ಹಾಗೂ ಚಿತ್ರದುರ್ಗ ಜಿಲ್ಲೆ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- by Suddi Team
- June 20, 2020
- 12 Views

ಚಿತ್ರದುರ್ಗ: ಪೂರ್ವ ವಲಯ ಹಾಗೂ ಚಿತ್ರದುರ್ಗ ಜಿಲ್ಲೆ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಡೆಸಿ ಅನೇಕ ವಿಷಯಗಳ ಕುರಿತು ಚರ್ಚಿಸಿದರು.
ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳಿಗೆ ಸೂಕ್ತ ಕ್ರಮವಹಿಸುವಂತೆ ಮತ್ತು ಜನರಲ್ಲಿ ಕೋವಿಡ್-19 ರ ಕುರಿತು ಜನಜಾಗೃತಿ ಮೂಡಿಸುವುದು. ಭದ್ರಾ ಮೇಲ್ದಂಡೆ ಯೋಜನೆ ಜಾರಿಗಾಗಿ 548 ದಿನಗಳ ಉಪವಾಸ ಸತ್ಯಾಗ್ರಹ ನಿಯಂತ್ರಿಸುವಲ್ಲಿ ಅಗತ್ಯ ಕ್ರಮ ಕೈಗೊಂಡು ಜಿಲ್ಲೆಯಲ್ಲಿ ನೀರಾವರಿ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸೂಕ್ತ ಸಲಹೆ ಹಾಗೂ ನಿರ್ಧಾರ ಕೈಗೊಳ್ಳುವುದು. ಗಣಿಗಾರಿಕೆ ಹಾಗೂ ಮರಳು ನೀತಿಯ ಕುರಿತು ಅಗತ್ಯ ಕ್ರಮ ವಹಿಸುವಂತೆ ಸೂಚಿಸಿ ಜಿಲ್ಲೆಗಳಲ್ಲಿ ಅಪರಾಧಗಳನ್ನು ತಡೆಗಟ್ಟುವ ಕ್ರಮಗಳನ್ನು ಸೂಕ್ತವಾಗಿ ನಿರ್ವಹಿಸುವಂತೆ ಹಾಗೂ ಬಾಲ್ಯ ವಿವಾಹ ಹಾಗೂ ಬಾಲಾಪರಾಧ ಮತ್ತು ಇತರೆ ಅಪರಾಧಗಳು ಆಗದ ರೀತಿ ಸೂಕ್ತ ಜಾಗೃತಿ ಮೂಡಿಸುವುದು. ಮತ್ತು ಮುಂದಿನ ಮಹಾಗಣಪತಿ ಆಚರಣೆಗೆ ಅಗತ್ಯ ಕ್ರಮ ಕೈಗೊಳ್ಳುವುದು ಪೊಲಿಸರ ಬಗ್ಗೆ ಜನಸಾಮಾನ್ಯರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು. ಕೋವಿಡ್ 19 ಅವಧಿಯಲ್ಲಿ ಸೂಕ್ತ ಹಾಗೂ ದಕ್ಷತೆಯಿಂದ ನಿರ್ವಹಣೆ ಅಭಿನಂದಿಸಲಾಯಿತು ಮತ್ತು ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಲಾಯಿತು.
ಲಾಕ್ ಡೌನ್ ತೆರವು ನಂತರ ಇಲಾಖೆ ಜವಾಬ್ದಾರಿ ಕುರಿತು ಚರ್ಚಿಸಲಾಯಿತು. ಇನ್ನು ಅನೇಕ ವಿಷಯಗಳನ್ನು ಚರ್ಚಿಸಿ ಸೂಕ್ತ ಕ್ರಮ ವಹಿಸಲು ಗೃಹ ಸಚಿವರು ಸೂಚಿಸಿದರು.
Related Articles
Thank you for your comment. It is awaiting moderation.
Comments (0)