ಮಲೆನಾಡಲ್ಲಿ ವರುಣನ ಆರ್ಭಟ: ತೀರ್ಥಹಳ್ಳಿ ಶಾಲಾ ಕಾಲೇಜುಗಳಿಗೆ ರಜೆ
- by Suddi Team
- June 28, 2018
- 30 Views
ಶಿವಮೊಗ್ಗ: ಮಲೆನಾಡ ಹೆಬ್ಬಸಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕಳೆದ ರಾತ್ರಿಯಿಂದ ತೀರ್ಥಹಳ್ಳಿ, ಹೊಸನಗರ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತೀರ್ಥಹಳ್ಳಿ ತಾಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಆಗುಂಬೆ ಘಾಟಿಯ ಒಂದು ತಿರುವಿನಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರಕ್ಕೆ ಕೆಲ ಕಾಲ ಅಡಚಣೆಯಾಗಿದ್ದು ತೆರವು ಕಾರ್ಯಾಚರಣೆ ನಡೆಸಿ ಸಂಚಾರಕ್ಕೆ ಅನುವು ಮಾಡಲಾಗಿದೆ.
ರಾಜ್ಯದ ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಘಟಕವಿರುವ ಲಿಂಗನಮಕ್ಕಿ ಜಲಾಶಯಕ್ಕೆ 36,360 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕೃಷಿ ಕ್ಷೇತ್ರದ ಬೆನ್ನೆಲುಬಾಗಿರುವ ಭದ್ರಾ ಜಲಾಶಯಕ್ಕೆ 7,737 ಕ್ಯೂಸೆಕ್ ಹಾಗೂ ತುಂಗಾ ಜಲಾಶಯಕ್ಕೆ 36,360 ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಲಿಂಗನಮಕ್ಕಿ ಹಾಗು ಭದ್ರಾ ಜಲಾಶಯದಿಂದ ಕಾಲುವೆಗಳ ಮೂಲಕ ನೀರು ಹರಿಸುತ್ತಿದ್ದು ತುಂಗಾ ಜಲಾಶಯದಿಂದ ಮಾತ್ರ ಒಳ ಹರಿವಿನಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.
Related Articles
Thank you for your comment. It is awaiting moderation.
Comments (0)