ಆನೆ, ಮಾನವ ಸಂಘರ್ಷಕ್ಕೆ Honey fencing  ಯೋಜನೆ: ಸಚಿವ ಲಾಡ್

ಬೆಂಗಳೂರು:ರಾಜ್ಯದಲ್ಲಿ ದಶಕಗಳಿಂದ ಆನೆ, ಮಾನವ ಸಂಘರ್ಷ ಸಮಸ್ಯೆ ಮುಂದುವರೆದಿದ್ದು ಇದಕ್ಕೊಂದು ಪರಿಹಾರ ಕಂಡುಕೊಳ್ಳಲು ಇದೀಗ ರಾಜ್ಯ ಸರ್ಕಾರ ಮುಂದಾಗಿದ್ದು, Honey fencing ಯೋಜನೆ ಎನ್ನುವ ಹೊಸ ಪ್ರಯೋಗಕ್ಕೆ ಮುಂದಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ಪ್ರಗತಿಪರಿಶೀಲನೆ ನಡೆಸಲಾಯಿತು,ರಾಜ್ಯದಲ್ಲಿ ಹಲವು ಕಡೆ ಮಾನವ ಪ್ರಾಣಿ ಸಂಘರ್ಷದ ವೇಳೆ ಪ್ರಾಣಹಾನಿ ಆಗಿರುವ ಬಗ್ಗೆ ಮತ್ತು ಇದಕ್ಕೆ ವೈಜ್ಞಾನಿಕ ಪರಿಹಾರ ಒದಗಿಸುವ ಬಗ್ಗೆ ಗಂಭೀರ ಚರ್ಚೆ ಸಭೆಯಲ್ಲಿ ನಡೆಯಿತು.

ಈ ವೇಳೆ ಸಚಿವ ಸಂತೋಷ್ ಲಾಡ್ ಅವರು , “Honey fencing, ಜೇನು ಕೃಷಿ” ಬಗ್ಗೆ ಮುಖ್ಯಮಂತ್ರಿಗಳಿಗೆ ವಿವರಿಸಿದರು.ಆನೆಗಳು ಜೇನು ನೊಣ ಇರುವ ಪ್ರದೇಶಕ್ಕೆ ಬರುವುದಿಲ್ಲ. ಹೀಗಾಗಿ ಆನೆ ಬ್ಯಾರಿಕೇಡ್ ಹಾಕಿರುವ ಮಾರ್ಗದುದ್ದಕ್ಕೂ ಜೇನು ಕೃಷಿ ಮಾಡಿದರೆ ರೈತರಿಗೂ ಅನುಕೂಲ, ಆನೆಗಳ ಕಾಟವೂ ತಪ್ಪುತ್ತದೆ ಎಂದು ವಿವರಿಸಿದರು.

ನಂತರ ಆನೆ ಮತ್ತು ಮಾನವ ಸಂಘರ್ಷ ತಡೆಯಲು ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು. ಆನೆ ಕಾರ್ಯಪಡೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಆನೆಗಳಿಗೆ ಸರಿಯಾದ ಆಹಾರ ಕಾಡಿನಲ್ಲೇ ಲಭ್ಯವಾಗುವಂತೆ ಮಾಡಬೇಕು. ಇದಕ್ಕೆ ಪೂರಕವಾಗಿ ಲಂಟಾನಾ ಕಳೆಗಳನ್ನು ತೆಗೆಯುವ ಕೆಲಸವಾಗಬೇಕು. ಇದೇ ರೀತಿ ಕುಡಿಯುವ ನೀರಿನ ಲಭ್ಯತೆಯೂ ಕಾಡಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಸೂಚಿಸಿದರು.

ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಜಿಂಕೆಗಳಿಂದ ರೈತರ ಬೆಳೆಗಳಿಗೆ ಹಾನಿ ಉಂಟಾಗುತ್ತಿದೆ. ಇದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂದರು.

ರಾಜ್ಯದಲ್ಲಿ 15,16,731 ಎಕ್ರೆ ಅರಣ್ಯೀಕರಣಕ್ಕೆ ಜಮೀನು ಲಭ್ಯವಿದೆ. 8.5 ಕೋಟಿ ಸಸಿಗಳನ್ನು ಕಳೆದ ಎರಡು ವರ್ಷಗಳಲ್ಲಿ ನೆಡಲಾಗಿದೆ.  ಪ್ರತಿ ವರ್ಷ ಎಷ್ಟು ಎಕ್ರೆ ಅರಣ್ಯೀಕರಣವಾಗಿದೆ? ಕಳೆದ 10ವರ್ಷಗಳಲ್ಲಿ ಎಷ್ಟು ಎಕ್ರೆ ಅರಣ್ಯೀಕರಣ ಮಾಡಲಾಗಿದೆ ಎಂಬ ಮಾಹಿತಿಯನ್ನು ಒದಗಿಸಬೇಕು.ಅರಣ್ಯೀಕರಣಕ್ಕೆ ಲಭ್ಯವಿರುವ ಜಮೀನಿನಲ್ಲಿ ಸಂಪೂರ್ಣ ಸಸಿಗಳನ್ನು ನೆಡಲು ಕ್ರಿಯಾ ಯೋಜನೆ ಸಿದ್ಧಪಡಿಸಿ, ಹಂತ ಹಂತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

Related Articles

Comments (0)

Leave a Comment