ಮೇಕೆದಾಟು ಯೋಜನೆಗೆ ತಮಿಳುನಾಡು,ಕೇಂದ್ರ ಸರ್ಕಾರದ ತಕರಾರು ಸಲ್ಲದು; ಸಿಎಂ ಸಿದ್ದರಾಮಯ್ಯ
- September 13, 2025
- 0 Likes
ಮಂಗಳೂರು:ಮುಂಗಾರು ಮಳೆಗೆ ಕರಾವಳಿ ನಲುಗುತ್ತಿದೆ ಕಳೆದ ಮೂರುನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮೂಲರಪಟ್ಣದ ಸೇತುವೆ ಕುಸಿದಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಬಿ.ಸಿ. ರೋಡ್ ಮತ್ತು ಕುಪ್ಪೆಪದವು ಸಂಪರ್ಕಿಸುವ ರಸ್ತೆಯ ನಡುವೆ ಫಲ್ಗುಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಇದೀಗ ಕುಸಿದಿದೆ. ಮಳೆಯಿಂದ ಮೊದಲೇ ಶಿಥಿಲಗೊಂಡಿದ್ದ ಸೇತುವೆ ಇದೀಗ ಕೊಚ್ಚಿಹೋಗಿದೆ.
ಕುಪ್ಪೆಪದವು-ಬಿ.ಸಿ.ರೋಡ್ ಸಂಪರ್ಕಿಸುವ ಈ ಸೇತುವೆಯ ಮೂಲಕ ದಿನನಿತ್ಯ ಹಲವು ವಾಹನಗಳು ಸಂಚರಿಸುತ್ತಿದ್ದವು.ಆದರ ಇದೀಗ ಸೇತುವೆ ಕುಸಿದ ಪರಿಣಾಮ ಸಂಪರ್ಕ ಕಡಿತಗೊಂಡಿದೆ. ಸೇತುವೆ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ತಾಳಿದ್ದರು ಎನ್ನುವ ಆರೋಪ ಸಾರ್ವಜನಿಕರಿಂದ ವ್ಯಕ್ತವಾಗಿದೆ.
Comments (0)