ಪವರ್ ಸ್ಟಾರ್ ಗೆ ಲಘು ಹೃದಯಾಘಾತ:ಪುನೀತ್ ಆರೋಗ್ಯ ಸ್ಥಿತಿ ಗಂಭೀರ..

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯ ತೊಂದರೆಯಿಂದ ಹೈಗ್ರೌಂಡ್ಸ್ ವ್ಯಾಪ್ತಿಯ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು,ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ರಾಜ್ ಕುಮಾರ್ ಕುಟುಂಬ ಸದಸ್ಯರು ಆಸ್ಪತ್ರೆಗೆ ಆಗಮಿಸಿದ್ದು ಅಭಿಮಾನಿಗಳು ದೌಡಾಯಿಸುತ್ತಿದ್ದಾರೆ.

ಬೆಳಗ್ಗೆ ಜಿಮ್ ಮಾಡುವಾಗ ಹೃದಯ ತೊಂದರೆ ಕಾಣಿಸಿಕೊಂಡಿದ್ದು, ಸಮೀಪದ ಕ್ಲಿನಿಕ್ ನಲ್ಲಿ ತಪಾಸಣೆ ಮಾಡಿಸಲಾಗಿದೆ, ಇಸಿಜಿ ಮಾಡಲಾಗಿದೆ ಅಷ್ಟರಲ್ಲಿ ಹೃದಯ ತೊಂದರೆ ಗಂಭೀರವಾಗಿದ್ದು ಕೂಡಲೇ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ತಂಡ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸಧ್ಯಕ್ಕೆ ಏನೂ ಹೇಳಲು ಸಾಧ್ಯವಿಲ್ಲ, ಚಿಕಿತ್ಸೆ ಮುಂದುವರೆಸಲಾಗಿದೆ, ಸ್ವಲ್ಪ ಸಮಯದ ನಂತರ ಹೆಚ್ಚಿನ ಮಾಹಿತಿ ನೀಡಿತ್ತೇವೆ ಎಂದಿದ್ದಾರೆ.

ಆಸ್ಪತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ, ದರ್ಶನ್, ಯಶ್ ಸೇರಿ ಸಿನಿ ದಿಗ್ಗಜರು ದೌಡಾಯಿಸಿದ್ದು, ರಾಜ್ ಕುಟುಂಬ ಸದಸ್ಯರ ಜೊತೆ ಮಾತುಕತೆ ನಡೆಸುತ್ತಿದೆ. ಅಭಿಮಾನಿಗಳು ಆಸ್ಪತ್ರೆ ಸಮೀಪಕ್ಕೆ ಆಗಮಿಸಿತ್ತಿದ್ದು ನೆಚ್ಚಿನ ನಟನ ಅನಾರೋಗ್ಯಕ್ಕೆ ಕಣ್ಣೀರಿಡುತ್ತಿದ್ದಾರೆ.

ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಆಸ್ಪತ್ರೆ ಸುತ್ತಮುತ್ತ ಸಂಚಾರ ನಿಯಂತ್ರಿಸಿ ಅಭಿಮಾನಿಗಳನ್ನು ತಡೆಯಲಾಗುತ್ತಿದೆ.

Related Articles

Comments (0)

Leave a Comment