ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ಚಾಲನಾ ತರಬೇತಿ: ಕೆಎಸ್‌ಆರ್‌ಟಿಸಿಯಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಅಲ್ಪಸಂಖ್ಯಾತ ನಿರ್ದೇಶನಾಲಯದ ಸಹಯೋಗದೊಂದಿಗೆ ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿ ಹಾಗೂ ಪರವಾನಗಿ (License) ನೀಡುವ ಯೋಜನೆಯನ್ನು ಹಮ್ಮಿಕೊಂಡಿದೆ.

ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕಾಲ ಉಚಿತ ತರಬೇತಿಯನ್ನು ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಕೂಡ ಒದಗಿಸಲಾಗುವುದು ಎಂದು ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ.

ಅರ್ಹತೆಗಳು:

ಸಮುದಾಯ: ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯದವರಿಗೆ ಮಾತ್ರ ಅವಕಾಶ.

ವಯೋಮಿತಿ: 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿರಬೇಕು.

ವಿದ್ಯಾಭರ್ಹತೆ: ಕನಿಷ್ಠ ಎಸ್‌ಎಸ್‌ಎಲ್‌ಸಿ (SSLC) ಉತ್ತೀರ್ಣರಾಗಿರಬೇಕು.

ತರಬೇತಿ ಕೇಂದ್ರಗಳು:

ಆಸಕ್ತ ಅಭ್ಯರ್ಥಿಗಳು ನೇರವಾಗಿ ತಮ್ಮ ಹತ್ತಿರದ ನಿಗಮದ ತರಬೇತಿ ಕೇಂದ್ರಗಳಿಗೆ (ಮಳವಳ್ಳಿ, ಮಾಲೂರು, ಹಾಸನ, ಚಿಕ್ಕಮಗಳೂರು ಮತ್ತು ಹೊಳಲ್ಕೆರೆ) ಭೇಟಿ ನೀಡಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ದಿನಾಂಕ:

ತರಬೇತಿಯು 23-03-2026 ರಿಂದ ಪ್ರಾರಂಭವಾಗಲಿದ್ದು, ಆಸಕ್ತರು ಅದಕ್ಕೂ ಮೊದಲು ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ಮೂಲಕ ಅಥವಾ ನೇರವಾಗಿ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಪ್ರಕಟಣೆಯಲ್ಲಿ ನೀಡಿರುವ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

 

Related Articles

Comments (0)

Leave a Comment