ಕೆಜಿಎಫ್ ನಲ್ಲಿ ಹೊಸ ಆರ್.ಟಿ.ಒ,ಸ್ವಯಂ ಚಾಲಿತ ಚಾಲನಾ ಪಥ ಉದ್ಘಾಟನೆ..!
- by Suddi Team
- August 29, 2025
- 119 Views

ಕೋಲಾರ: ಚಿನ್ನದಗಣಿ ನಾಡು ಕೆಜಿಎಫ್ ನಲ್ಲಿ ನೂತನ ಪ್ರಾದೇಶಿಕ ಸಾರಿಗೆ ಕಛೇರಿ ಮತ್ತು ಸ್ವಯಂ ಚಾಲಿತ ಚಾಲನಾ ಪಥ ಸೇವೆಗೆ ಮುಕ್ತಗೊಂಡಿದ್ದು, ರಾಜ್ಯದಲ್ಲಿ ಜಿಲ್ಲೆಗೆ ಒಂದರಂತೆ ಪಿ.ಪಿ.ಪಿ. ಅಡಿ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಕೆ.ಜಿ.ಎಫ್ ನಲ್ಲಿ ರೂ.5 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಪ್ರಾದೇಶಿಕ ಸಾರಿಗೆ ಕಛೇರಿ ಮತ್ತು ರೂ.5 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಿರುವ ಸ್ವಯಂ ಚಾಲಿತ ಚಾಲನಾ ಪಥದ ಉದ್ಘಾಟನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೆರವೇರಿಸಲಾಗಿದೆ.
ನಂತರ ಮಾತನಾಡಿದ ಸಚಿವರು ಸಾರಿಗೆ ಇಲಾಖೆಯು ರಾಜ್ಯದಲ್ಲಿ 7 ಸ್ವಂತ ಕಛೇರಿ ಕಟ್ಟಡವನ್ನು ವೆಚ್ಚ ರೂ. 45.74 ಕೋಟಿಗಳಲ್ಲಿ ಹೊಂದಿದೆ.ಇನ್ನಿ 8 ಸ್ವಂತ ಕಟ್ಟಡ ಕಛೇರಿಗಳು ನಿರ್ಮಾಣ ವೆಚ್ಚ ರೂ. 70.00 ಕೋಟಿಗಳು ಕಾಮಗಾರಿ ಪ್ರಗತಿಯಲ್ಲಿದೆ. ಮಧುಗಿರಿ ಮತ್ತು ಹೊನ್ನಾವರ ಕಛೇರಿ ಕಟ್ಟಡಗಳ ಕಾಮಗಾರಿಗಳನ್ನು ಒಟ್ಟು ರೂ.10.05 ಕೋಟಿಗಳ ವೆಚ್ಚದಲ್ಲಿ ನಿರ್ಮಿಸಲಾಗಿದ್ದು. ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದರು.
ಸ್ವಯಂ ಚಾಲಿತ ಪರೀಕ್ಷಾ ಪಥಗಳ ನಿರ್ಮಾಣ ಕಾಮಗಾರಿ, 9 ಡ್ರೈವಿಂಗ್ ಟ್ರ್ಯಾಕ್ ಅನ್ನು 44.21 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. 203 ಕೋಟಿ ವೆಚ್ಚದಲ್ಲಿ 28 ಡ್ರೈವಿಂಗ್ ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿದ್ದು, ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗ ಗಳಲ್ಲಿ ರೂ.21 ಕೋಟಿಗಳ ವೆಚ್ಚದಲ್ಲಿ ಡ್ರೈವಿಂಗ್ ಟ್ರ್ಯಾಕ್ ನಿರ್ಮಾಣ ಕೈಗೊಳ್ಳಲು ಉದ್ದೇಶಿಸಿದೆ ಎಂದರು.
ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಂಡಿದ್ದು, ರಾಜ್ಯದಲ್ಲಿ ಜಿಲ್ಲೆಗೆ ಒಂದರಂತೆ ಪಿ.ಪಿ.ಪಿ. ಅಡಿ 32 ಸ್ಥಳಗಳಲ್ಲಿ ಸ್ವಯಂ ಚಾಲಿತ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ಉದ್ದೇಶಿಸಲಾಗಿದೆ. ರಾಜ್ಯದಲ್ಲಿ ಗುಣಮಟ್ಟದ ಚಾಲಕರನ್ನು ತರಬೇತಿಗೊಳಿಸುವ ನಿಟ್ಟಿನಲ್ಲಿ ಭಾರಿ ವಾಹನ ಚಾಲಕರ 4 ತರಬೇತಿ ಕೇಂದ್ರಗಳನ್ನು ರೂ. 60.76 ಕೋಟಿಗಳಲ್ಲಿ ಸ್ಥಾಪಿಸಲಾಗಿದೆ.1 ತರಬೇತಿ ಕೇಂದ್ರ ಕಾಮಗಾರಿ ಪ್ರಗತಿಯಲ್ಲಿದ್ದು, ಅದರ ವೆಚ್ಚ 6.50 ಕೋಟಿಗಳಾಗಿದೆ. ಇದರೊಂದಿಗೆ, ವಿಜಯಪುರ, ಬಳ್ಳಾರಿ ಮತ್ತು ನಾಗಮಂಗಲ ಗಳಲ್ಲಿ ಭಾರಿ ವಾಹನ ಚಾಲಕರ ತರಬೇತಿ ಕೇಂದ್ರಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.
Related Articles
Thank you for your comment. It is awaiting moderation.
Comments (0)