ಚಿನ್ನದ ಪದಕ ಗೆದ್ದ ಸಾರಿಗೆ ನಿಗಮದ ಸಿಬ್ಬಂದಿ ಮಕ್ಕಳು: ವಿದ್ಯಾರ್ಥಿಗಳ ಸನ್ಮಾನಿಸಿದ ಸಾರಿಗೆ ಸಚಿವರು
- by Suddi Team
- January 7, 2026
- 117 Views
ಬೆಂಗಳೂರು:ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ವಿದ್ಯಾಭ್ಯಾಸದಲ್ಲಿ ಸಾಧನೆ ತೋರಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮಕ್ಕಳನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸನ್ಮಾನಿಸಿ ಪ್ರೋತ್ಸಹ ನೀಡಿದ್ದು ಮುಂದಿನ ಭವಿಷ್ಯಕ್ಕೆ ಶುಭ ಕೋರಿದ್ದಾರೆ.
ಶಾಂತಿನಗರದಲ್ಲಿರವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಸರಳ ಸಮಾರಂಭದ ಮೂಲಕ ಚಿನ್ನದ ಪದಕ ವಿಜೇತ ಸಾರಿಗೆ ನಿಗಮದ ಸಿಬ್ಬಂದಿ ಮಕ್ಕಳಿಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸನ್ಮಾನಿಸಿದರು. ನಿಗಮದಲ್ಲಿನ ಸಿಬ್ಬಂದಿಗಳ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ, ಹೆಚ್ಚಿನ ಅಂಕಗಳಿಸಿ ಚಿನ್ನದ ಪದಕ ಪಡೆದಿರುವ 06 ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ರೂ.5,000/- ಗಳ ಗೌರವಧನ, ಪ್ರಮಾಣ ಪತ್ರ ( ಸಚಿವರು ವೈಯಕ್ತಿಕವಾಗಿ ಎಲ್ಲಾ 06 ವಿದ್ಯಾರ್ಥಿಗಳಿಗೆ ತಲಾ ರೂ.20,000/- ಗಳಂತೆ ನಗದು ಬಹಮಾನ) ನೀಡಿ ಗೌರವಿಸಿದರು.
ನಂತರ ವಿದ್ಯಾರ್ಥಿಗಳನ್ನುಉದ್ದೇಶಿಸಿ ಮಾತನಾಡಿದ ಸಚಿವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಠಿಣ ಪರಿಶ್ರಮ, ಶಿಸ್ತು ಮತ್ತು ಆತ್ಮವಿಶ್ವಾಸ ಇವುಗಳೇ ಯಶಸ್ಸಿನ ಮಂತ್ರಗಳು. ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ವಿಜ್ಞಾನ, ತಂತ್ರಜ್ಞಾನ, ಕಲೆ, ಕ್ರೀಡೆ ಅಥವಾ ಯಾವುದೇ ಕ್ಷೇತ್ರವಾಗಿರಲಿ – ನೀವು ಆಸಕ್ತಿ ಹೊಂದಿರುವ ಕ್ಷೇತ್ರದಲ್ಲಿ ಶ್ರೇಷ್ಠತೆ ಸಾಧಿಸಲು ಪ್ರಯತ್ನಿಸಿ ಎಂದರು.
ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲನಾ, ತಾಂತ್ರಿಕ ಸಿಬ್ಬಂದಿಗಳು ಬಹಳ ಶ್ರಮ ಜೀವಿಗಳಾಗಿದ್ದು, ಇವರುಗಳು ಸಾರ್ವಜನಿಕರ ಸೇವೆಗೆ ಹೆಚ್ಚಿನ ಅವಧಿಯನ್ನು ಮೀಸಲಿಟ್ಟು, ಕುಟುಂಬಕ್ಕೆ ಸಮಯವನ್ನು ನೀಡಲು ಕಷ್ಟಸಾಧ್ಯವಾಗಿರುತ್ತದೆ. ಆದರೂ ಸಹ ತಾವುಗಳು ಪೋಷಕರ ಶ್ರಮವನ್ನು ಅರ್ಥ ಮಾಡಿಕೊಂಡು ಉತ್ತಮ ವಿದ್ಯಾಭ್ಯಾಸ ಪಡೆದು ಚಿನ್ನದ ಪದಕ ಗಳಿಸಿ ಅವರಿಗೆ ಗೌರವ ತಂದಿರುವುದು ಶ್ಲಾಘನೀಯ. ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯಲ್ಲಿ ಶ್ರಮವಹಿಸಿದ ಎಲ್ಲಾ ಪೋಷಕರಿಗೂ ಅಭಿನಂದನೆ ತಿಳಿಸಿದರು.
ನಿಮ್ಮ ಜ್ಞಾನವನ್ನು ಕೇವಲ ನಿಮ್ಮ ಲಾಭಕ್ಕಾಗಿ ಮಾತ್ರವಲ್ಲ, ಸಮಾಜ ಮತ್ತು ರಾಷ್ಟ್ರದ ಅಭಿವೃದ್ಧಿಗೆ ಬಳಸಿ ಯಶಸ್ಸು ಖಂಡಿತ ನಿಮ್ಮದಾಗುತ್ತದೆ. ನಿಮ್ಮ ಭವಿಷ್ಯ ಪ್ರಕಾಶಮಾನವಾಗಲಿ ಎಂದು ಹಾರೈಸಿದರು.
ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳು:
1) ಡಾ. ಗಗನ ಎಂ., ಎಂ.ಬಿ.ಬಿ.ಎಸ್., ( ಮುನಿರಾಜಪ್ಪ ಕೆ.ಇ., ಕುಶಲಕರ್ಮಿ, ಬಿ.ಸಂ. 1417, ಪ್ರಾದೇಶಿಕ ಕಾರ್ಯಗಾರ, ಕೆಂಗೇರಿ, ಬೆಂಗಳೂರು ರವರ ಮಗಳು) ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಚಿನ್ನದ ಪದಕ ಪಡೆದಿರುತ್ತಾರೆ.
2) ಕು|| ವಿಸ್ಮಯ ಟಿ.ಆರ್, M.Tech (ರೇಣುಕಾರ್ಯ ಟಿ.ಕೆ., ಚಾಲಕ ಕಂ ನಿರ್ವಾಹಕ, ಬಿ.ಸಂ 1795/16747, ಪುತ್ತೂರು ವಿಭಾಗ ರವರ ಮಗಳು) ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಚಿನ್ನದ ಪದಕ ಪಡೆದಿರುತ್ತಾರೆ.
3) ಕು|| ರೂಫಿಯಾ ಕೆ.ಎಂ, M.Sc ( ಮಹಬೂಬ್ ಸಾಬ್ ಹೆಚ್. ಸಂಚಾರ ನಿಯಂತ್ರಕರು, ಚಿಕ್ಕಬಳ್ಳಾಪುರ ವಿಭಾಗ ರವರ ಮಗಳು) ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ 07 ಚಿನ್ನದ ಪದಕ ಪಡೆದಿರುತ್ತಾರೆ.
4) ಕು|| ಸತೀಶ್ ಕುಮಾರ್ ದೊಡ್ಡಮನಿ, Master of Performing Arts- Drama ( ಪದ್ದವ್ವ ಗಣಿ, ಚಾಲಕ ಕಂ ನಿರ್ವಾಹಕಿ, ಬಿ.ಸಂ. 6404, ಬೆಂಗಳೂರು ಕೇಂದ್ರೀಯ ವಿಭಾಗ, 6ನೇ ಘಟಕ ರವರ ಮಗ) ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ ಚಿನ್ನದ ಪದಕ ಪಡೆದಿರುತ್ತಾರೆ.
5) ಡಾ. ಸಾನಿಯಾ ಬಿ.ಬಿ., Bachelor of Dental Surgery (BDS) ( ಅಕ್ರಂ ಪಾಷ, ಚಾಲಕ-ಕಂ-ನಿರ್ವಾಹಕ, ಬಿ.ಸಂ. 760, ಮೈಸೂರು ನಗರ ವಿಭಾಗ, ನಂಜನಗೂಡು ಘಟಕ ರವರ ಮಗಳು) ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ, 07 ಚಿನ್ನದ ಪದಕ ಹಾಗೂ 02 ಬೆಳ್ಳಿ ಪದಕ ಪಡೆದಿರುತ್ತಾರೆ.
6) ಕು|| ಟಿ. ಹರ್ಮೀನ್, B.Sc ( ತಾಯಬ್ ಅಹ್ಮದ್, ನಿರ್ವಾಹಕ, ಬಿ.ಸಂ. 1219, ಮೈಸೂರು ಗ್ರಾಮಾಂತರ ವಿಭಾಗ ರವರ ಮಗಳು) ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ, 06 ಚಿನ್ನದ ಪದಕ ಪಡೆದಿರುತ್ತಾರೆ.
ನಿಗಮದಲ್ಲಿನ ಸಿಬ್ಬಂದಿಗಳ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸಾರಿಗೆ ವಿದ್ಯಾಚೇತನ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆ ಅಡಿಯಲ್ಲಿ ಈವರೆಗೂ 5,450 ವಿದ್ಯಾರ್ಥಿಗಳಿಗೆ ರೂ.2.76 ಕೋಟಿಗಳ ವಿದ್ಯಾರ್ಥಿ ವೇತನ ನೀಡಲಾಗಿರುತ್ತದೆ.
ಈ ಸಂದರ್ಭದಲ್ಲಿ ವಿ.ಎಸ್. ಆರಾಧ್ಯ, ಅಧ್ಯಕ್ಷರು, ಬೆಂ.ಮ.ಸಾ. ಸಂಸ್ಥೆ,ಮೊಹಮ್ಮದ್ ರಿಜ್ವಾನ್ ನವಾಬ್, ಉಪಾಧ್ಯಕ್ಷರು, ಕರಾರಸಾ ನಿಗಮ, ಅಕ್ರಂ ಪಾಷ ಭಾಆಸೇ., ವ್ಯವಸ್ಥಾಪಕ ನಿರ್ದೇಶಕರು, ಕರಾರಸಾ ನಿಗಮ, ಡಾ. ನಂದಿನಿದೇವಿ ಕೆ ಭಾಅಸೇ., ನಿರ್ದೇಶಕರು (ಸಿ ಮತ್ತು ಜಾ) ಕರಾರಸಾ ನಿಗಮ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Related Articles
Thank you for your comment. It is awaiting moderation.


Comments (0)