ಕೆಂಪೇಗೌಡ ಏರ್ ಪೋರ್ಟ್ ಟು ದಾವಣಗೆರೆ: ಫ್ಲೈ ಬಸ್ ಸಂಚಾರ ಆರಂಭಿಸಿದ ಕೆಎಸ್ಆರ್ಟಿಸಿ

ದೇವನಹಳ್ಳಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಣ್ಣೆನಗರಿ ದಾವಣಗೆರೆಗೆ ಫ್ಲೈಬಸ್ ಸೇವೆಯನ್ನು ಆರಂಭಿಸಿತು.ಜತೆಗೆ ಈ ಬಸ್ ನಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಗೆ ಕಾಂಪ್ಲಿಮೆಂಟರಿಯಾಗಿ ನಂದಿನಿ ಸ್ನ್ಯಾಕ್ಸ್ ಬಾಕ್ಸ್  ಅನ್ನು ಉಚಿತವಾಗಿ ನೀಡಲಾಗುತ್ತದೆ.

ಹೊಸದಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್ (ವೋಲ್ವೋ ಮಲ್ಟಿ ಆಕ್ಸೆಲ್) ಸೇವೆಯನ್ನು ಏರ್ ಪೋರ್ಟ್ ಟರ್ಮಿನಲ್ -2 ರಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು ಇದರೊಂದಿಗೆ ಫ್ಲೈ ಬಸ್ ಪ್ರಯಾಣಿಕರಿಗೆ ನಂದಿನಿ ಉತ್ಪನ್ನಗಳ ಸ್ಯ್ನಾಕ್ಸ್ ವಿತರಣೆಗೂ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

ಹೊಸದಾಗಿ ಪ್ರಾರಂಭಿಸುತ್ತಿರುವ ಬೆಂಗಳೂರು- ದಾವಣಗೆರೆ ಮಾರ್ಗದ ಫ್ಳೈ ಬಸ್ ವೇಳಾಪಟ್ಟಿ:

ಬೆಂಗಳೂರು ವಿಮಾನ ನಿಲ್ದಾಣದಿಂದ ಹೊರಟು ದಾವಣಗೆರೆ ತಲುಪುವ ಸಮಯ:

# 00.45 hrs > 05.45 hrs

# 10.00 hrs > 15.00 hrs

ದಾವಣಗೆರೆ ಇಂದ ಹೊರಟು ಬೆಂಗಳೂರು ವಿಮಾನ ನಿಲ್ದಾಣ ತಲುಪುವ ಸಮಯ:

# 08.00 hrs > 13.00 hrs

# 17.00 hrs > 22.00 hrs

ಮಾರ್ಗ ವಿವರ:

ಬೆಂಗಳೂರು ವಿಮಾನ ನಿಲ್ದಾಣ > ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಮೂಲಕ ದೊಡ್ಡಬಳ್ಳಾಪುರ ಬೈಪಾಸ್ > ಡಾಬಸ್ ಪೇಟೆ > ತುಮಕೂರು ಬೈಪಾಸ್  > ಚಿತ್ರದುರ್ಗ ಬೈಪಾಸ್ ಮೂಲಕ ನೇರವಾಗಿ ದಾವಣಗೆರೆ.

ಪ್ರಯಾಣಿಕರ ಅನುಕೂಲಕ್ಕಾಗಿ  ತುಮಕೂರು ಬೈಪಾಸ್ ಹಾಗೂ ಚಿತ್ರದುರ್ಗ ಬೈಪಾಸ್ ಸೇರಿ ಎರಡು ಮಾರ್ಗಮಧ್ಯದ ಪಿಕಪ್ ಮತ್ತು ಡ್ರಾಪ್ ಪಾಯಿಂಟ್ ನೀಡಲಾಗಿದೆ.

ದರ ವಿವರ:

ಬೆಂಗಳೂರು ವಿಮಾನ ನಿಲ್ದಾಣದಿಂದ

# ತುಮಕೂರು ₹400

# ಚಿತ್ರದುರ್ಗ ₹980

# ದಾವಣಗೆರೆ ₹1250

KMF ರವರಿಂದ ನಂದಿನಿ ಉತ್ಪನ್ನಗಳ ಸ್ನ್ಯಾಕ್ಸ್ ಬಾಕ್ಸ್ ಅನ್ನು ಖರೀದಿಸಿ, ದಿನಾಂಕ: 15/11/2025 ರಿಂದ ಜಾರಿಗೆ ಬರುವಂತೆ ಎಲ್ಲಾ ಫ್ಲೈಬಸ್ ಪ್ರಯಾಣಿಕರಿಗೆ ಉಚಿತವಾಗಿ ವಿತರಿಸಲಾಗುತ್ತದೆ. ಕಿಟ್ ನಲ್ಲಿ ನೀರಿನ ಬಾಟಲ್, Flavoured Milk, Cookies ( Sweet & Kara)  ಕೇಕ್,‌ಕೋಡುಬಳೆ ‌ಪ್ಯಾಕೆಟ್ ಇರುತ್ತದೆ. ಸದರಿ‌ ಕಿಟ್ ಅನ್ನು ಬ್ರ್ಯಾಂಡ್‌ ಮಾಡಲಾಗಿದ್ದು, ಅದರ ಹಿಂಬದಿಯಲ್ಲಿ  ನಿಗಮದ‌ ಪ್ರತಿಷ್ಠಿತ ಸೇವೆಗಳು‌‌‌  ದಕ್ಷಿಣ ಭಾರತದಾದ್ಯಂತ ‌ಕಾರ್ಯಾಚರಣೆಯಾಗುವ ಸ್ಥಳಗಳ‌ ಮಾಹಿತಿ ಮತ್ತು QR Scanner Code ಟಿಕೇಟ್ ಬುಕ್‌ಮಾಡಲು ಅನುವಾಗುವಂತೆ ಮುದ್ರಿಸಲಾಗಿದೆ.

ಈ ಕುರಿತು ಮಾತನಾಡಿದ ಸಾರಿಗೆ ಸಚಿವರು, ಸಾರಿಗೆ ಸಚಿವರಾಗಿದ್ದ ತಮ್ಮ ಮೊದಲ ಅವಧಿಯಲ್ಲಿ ಮೊದಲ ಬಾರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿಂದ ಮೈಸೂರಿಗೆ ನೇರ ಫ್ಲೈಬಸ್ ಸಾರಿಗೆ ವ್ಯವಸ್ಥೆಯು ಆಗಸ್ಟ್ 2013 ರಿಂದ ಪ್ರಾರಂಭಿಸಲಾಗಿತ್ತು. ನಂತರದ ದಿನಗಳಲ್ಲಿ ಮಡಿಕೇರಿ, ಕುಂದಾಪುರಕ್ಕೆ ಫ್ಲೈ ಬಸ್ ಸೇವೆಯನ್ನು ವಿಸ್ತರಿಸಲಾಯಿತು.ಸಾರ್ವಜನಿಕ ಸಾರಿಗೆಯನ್ನು ಉತ್ತೀಜಿಸುವುದು ಹೆಚ್ಚು ಹೆಚ್ಚು ಬಳಸುವಂತೆ ಮಾಡುವುದು ನಮ್ಮ ಪ್ರಥಮ ಆದ್ಯತೆಯಾಗಿರಬೇಕು.  ಆ ನಿಟ್ಟಿನಲ್ಲಿ ಇಂದು ಬೆಂಗಳೂರು – ದಾವಣಗೆರೆ‌ ನಡುವೆ ನೇರ ಫ್ಲೈ ಬಸ್ ಸೇವೆ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಹೊಸ ಹೊಸ ಸೇವೆ ಮತ್ತು‌ ಉಪಕ್ರಮಗಳನ್ನು ಅನುಷ್ಠಾನಗೊಳಿಸುವಲ್ಲಿ ಮುಂಚೂಣಿಯಲ್ಲಿದೆ. ಭಾರತ‌ ಸರ್ಕಾರದಿಂದ ಇತ್ತೀಚೆಗೆ ಮೈಸೂರು ನಗರದ ಧ್ವನಿ‌ಸ್ಪಂದನ ಉಪಕ್ರಮಕ್ಕೆ ಉತ್ಕೃಷ್ಟತಾ‌ ಪ್ರಶಸ್ತಿ‌ ಲಭಿಸಿದೆ. ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸಲು ಫ್ಲೈ ಬಸ್ ಗಳಲ್ಲಿ ಇನ್ನು ಮುಂದೆ ಸ್ಯ್ನಾಕ್ಸ್ ಕಿಟ್ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಪ್ರಸ್ತುತ ಕಾರ್ಯಾಚರಣೆಯಲ್ಲಿರುವ ಫ್ಲೈಬಸ್ ಸಾರಿಗೆಗಳ ವಿವರ:

ಒಟ್ಟು ಮಾರ್ಗಗಳು: 13

ಮೈಸೂರು: 09

ಮಡಿಕೇರಿ: 02

ದಾವಣಗೆರೆ: 02

ಕುಂದಾಪುರ: 02 (ಅಂಬಾರಿ ಉತ್ಸವ)

ದಿನವಹಿ ಟ್ರಿಪ್ ಗಳು: 44

ದಿನವಹಿ ಕಿಮೀ: 10240

ಪ್ರತಿ ಕಿಮೀ ಆದಾಯ: ₹90

ದಿನವಹಿ ಸರಾಸರಿ ಪ್ರಯಾಣಿಕರ ಸಂಖ್ಯೆ: 1050

ಕಾರ್ಯಕ್ರಮದಲ್ಲಿ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ‌ ಪಾಷ , ನಿರ್ದೇಶಕರು  (ಸಿಬ್ಬಂದಿ & ಜಾಗೃತ)

ಡಾ.ಕೆ ನಂದಿನಿ ದೇವಿ ,ನಿರ್ದೇಶಕರು (ಮಾಹಿತಿ ‌ತಂತ್ರಜ್ಞಾನ) ಇಬ್ರಾಹಿಂ ಮೈಗೂರ , ಕೆಐಎಎಲ್ ಮುಖ್ಯ ವಾಣಿಜ್ಯ ಅಧಿಕಾರಿ ಕೆನೆತ್ ,ಉಪಾಧ್ಯಕ್ಷ ಪ್ರವತ್ ,ಸಂಜಯ್ ಚಂದ್ರ, ಸ್ವಾತಿ ರೆಡ್ಡಿ, ಹಾಗೂ ನಿಗಮದ ಅಧಿಕಾರಿ‌ ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Related Articles

Comments (0)

Leave a Comment